ಬ್ರೇಕಿಂಗ್ ನ್ಯೂಸ್
12-03-23 05:36 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತೊಂದು ವಿವಾದ ಮೈಗೆಳೆದುಕೊಂಡಿದ್ದಾರೆ. ಅಶ್ಲೀಲ ಪದ ಬಳಸಿದ್ದಕ್ಕೆ ಒಂದು ಕ್ಷಣ ಇಡೀ ಸಭೆಯೇ ಅವಕ್ಕಾಗಿತ್ತು. ಸಿದ್ದರಾಮಯ್ಯ ಕುರಿತಾಗಿ ಅಶ್ಲೀಲ ಪದ ಬಳಸಿ ತಾವೇ ತಮ್ಮ ಸಣ್ಣತನ ತೋರಿಸಿದ್ದಾರೆ.
ಪುತ್ತೂರಿನಲ್ಲಿ ಶನಿವಾರ ಸಂಜೆ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ನೆರೆದಿದ್ದ ಮಹಿಳೆಯರು ಸೇರಿದಂತೆ ನೆರೆದಿದ್ದ ಕಾರ್ಯಕರ್ತರ ಎದುರು ಅಶ್ಲೀಲ ಪದ ಪ್ರಯೋಗ ಮಾಡುವ ಮೂಲಕ ವಿವಾದ ಎಬ್ಬಿಸಿದ್ದಾರೆ.

ಇಂಥ ಪದ ಪ್ರಯೋಗ ಮಾಡುವ ಮೊದಲು ಪತ್ರಕರ್ತರೇ ಇದನ್ನೆಲ್ಲ ಬರೀಬೇಡಿ ಎಂದು ವಿನಂತಿಸಿದರು..! ನಾಲಗೆ ಹರಿಯ ಬಿಟ್ಟ ಮೇಲೆ, ಪತ್ರಕರ್ತರು ಬರೆದರೂ ನನಗೇಗೂ ಬೇಜಾರಿಲ್ಲ ಬಿಡಿ ಎಂದು ಹೇಳುವ ಮೂಲಕ ಅಹಂಕಾರ ತೋರಿಸಿದರು. ಭಾಷಣದುದ್ದಕ್ಕೂ ಸಿದ್ಧರಾಮಯ್ಯ ವಿರುದ್ಧ ಹರಿಹಾಯ್ದ ಈಶ್ವರಪ್ಪ, ಏಕವಚನ ಪ್ರಯೋಗದಿಂದಲೇ ಕೆಣಕಿದರು. ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯ ಸೋಲಿಸಿದ್ದು ಸ್ವ ಪಕ್ಷದವರೇ. ಹಿಂದೆ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಸೋತಿದ್ದರು. ಅವರು ಗೆದ್ದರೆ ಎಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನೀಡ್ತಾರೋ ಅನ್ನೋ ಭಯ ಸಿದ್ರಾಮಯ್ಯಗಿತ್ತು. ಅದಕ್ಕೆ ಕುರುಬ ಸಮಾಜದ ಕೆಲವರನ್ನು ಅಲ್ಲಿಗೆ ಕಳಿಸಿ ಪರಮೇಶ್ವರ್ ಗೆಲ್ಲದಂತೆ ನೋಡಿಕೊಂಡರು. ಅದೊಂದು ದಿನ ಪರಮೇಶ್ವರ್ ಸಿಕ್ಕಾಗ ಯಾಕಪ್ಪಾ ಸೋತಿ ಎಂದು ಕೇಳಿದೆ. ಪತ್ರಕರ್ತರು ದಯವಿಟ್ಟು ಇದನ್ನು ಬರೀಬೇಡಿ. ಆ ನನ್ ಮಗ ಸೋಲಿಸಿದ ಎಂದರು.
ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯ ಸೋತ ಬಳಿಕ ಅದೊಂದು ದಿನ ಎದುರು ಸಿಕ್ಕ ಸಿದ್ರಾಮಯ್ಯ ಜತೆ ಯಾಕಪ್ಪಾ ಸೋತಿ ಎಂದು ಕೇಳಿದೆ. ಆ ಸೂ... ಮಗ ಸೋಲಿಸಿದ ಎಂದು ಉತ್ತರಿಸಿದ್ದರು. ಪತ್ರಕರ್ತರು ಇದನ್ನೆಲ್ಲ ಬರೆದರೂ ನನಗೇನೂ ಬೇಜಾರಿಲ್ಲ ಎಂದರು ಈಶ್ವರಪ್ಪ. ಈಶ್ವರಪ್ಪ ಭಾಷಣದಲ್ಲಿ ಹಿಂದುತ್ವ, ರಾಷ್ಟ್ರೀಯತೆ, ಮೋದಿ ಶಬ್ದಗಳು ಬಂದಾಗಲೆಲ್ಲ ಸಭೆಯಿಂದ ಚಪ್ಪಾಳೆ ಸುರಿಮಳೆ ಕೇಳಿ ಬಂದರೆ, ಅಶ್ಲೀಲ ಪದಪ್ರಯೋಗ ಮಾಡುತ್ತಿದ್ದಂತೆ ಇದ್ದಕ್ಕಿದ್ದಂತೆ ಬಿಜೆಪಿ ಸಭೆಯಲ್ಲಿ ಮೌನ ಆವರಿಸಿತು.
Eshwarappa lashes out Siddaramaiah using Vulgar words at Puttur.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm