ಬ್ರೇಕಿಂಗ್ ನ್ಯೂಸ್
12-03-23 05:36 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತೊಂದು ವಿವಾದ ಮೈಗೆಳೆದುಕೊಂಡಿದ್ದಾರೆ. ಅಶ್ಲೀಲ ಪದ ಬಳಸಿದ್ದಕ್ಕೆ ಒಂದು ಕ್ಷಣ ಇಡೀ ಸಭೆಯೇ ಅವಕ್ಕಾಗಿತ್ತು. ಸಿದ್ದರಾಮಯ್ಯ ಕುರಿತಾಗಿ ಅಶ್ಲೀಲ ಪದ ಬಳಸಿ ತಾವೇ ತಮ್ಮ ಸಣ್ಣತನ ತೋರಿಸಿದ್ದಾರೆ.
ಪುತ್ತೂರಿನಲ್ಲಿ ಶನಿವಾರ ಸಂಜೆ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ನೆರೆದಿದ್ದ ಮಹಿಳೆಯರು ಸೇರಿದಂತೆ ನೆರೆದಿದ್ದ ಕಾರ್ಯಕರ್ತರ ಎದುರು ಅಶ್ಲೀಲ ಪದ ಪ್ರಯೋಗ ಮಾಡುವ ಮೂಲಕ ವಿವಾದ ಎಬ್ಬಿಸಿದ್ದಾರೆ.

ಇಂಥ ಪದ ಪ್ರಯೋಗ ಮಾಡುವ ಮೊದಲು ಪತ್ರಕರ್ತರೇ ಇದನ್ನೆಲ್ಲ ಬರೀಬೇಡಿ ಎಂದು ವಿನಂತಿಸಿದರು..! ನಾಲಗೆ ಹರಿಯ ಬಿಟ್ಟ ಮೇಲೆ, ಪತ್ರಕರ್ತರು ಬರೆದರೂ ನನಗೇಗೂ ಬೇಜಾರಿಲ್ಲ ಬಿಡಿ ಎಂದು ಹೇಳುವ ಮೂಲಕ ಅಹಂಕಾರ ತೋರಿಸಿದರು. ಭಾಷಣದುದ್ದಕ್ಕೂ ಸಿದ್ಧರಾಮಯ್ಯ ವಿರುದ್ಧ ಹರಿಹಾಯ್ದ ಈಶ್ವರಪ್ಪ, ಏಕವಚನ ಪ್ರಯೋಗದಿಂದಲೇ ಕೆಣಕಿದರು. ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯ ಸೋಲಿಸಿದ್ದು ಸ್ವ ಪಕ್ಷದವರೇ. ಹಿಂದೆ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಸೋತಿದ್ದರು. ಅವರು ಗೆದ್ದರೆ ಎಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನೀಡ್ತಾರೋ ಅನ್ನೋ ಭಯ ಸಿದ್ರಾಮಯ್ಯಗಿತ್ತು. ಅದಕ್ಕೆ ಕುರುಬ ಸಮಾಜದ ಕೆಲವರನ್ನು ಅಲ್ಲಿಗೆ ಕಳಿಸಿ ಪರಮೇಶ್ವರ್ ಗೆಲ್ಲದಂತೆ ನೋಡಿಕೊಂಡರು. ಅದೊಂದು ದಿನ ಪರಮೇಶ್ವರ್ ಸಿಕ್ಕಾಗ ಯಾಕಪ್ಪಾ ಸೋತಿ ಎಂದು ಕೇಳಿದೆ. ಪತ್ರಕರ್ತರು ದಯವಿಟ್ಟು ಇದನ್ನು ಬರೀಬೇಡಿ. ಆ ನನ್ ಮಗ ಸೋಲಿಸಿದ ಎಂದರು.
ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯ ಸೋತ ಬಳಿಕ ಅದೊಂದು ದಿನ ಎದುರು ಸಿಕ್ಕ ಸಿದ್ರಾಮಯ್ಯ ಜತೆ ಯಾಕಪ್ಪಾ ಸೋತಿ ಎಂದು ಕೇಳಿದೆ. ಆ ಸೂ... ಮಗ ಸೋಲಿಸಿದ ಎಂದು ಉತ್ತರಿಸಿದ್ದರು. ಪತ್ರಕರ್ತರು ಇದನ್ನೆಲ್ಲ ಬರೆದರೂ ನನಗೇನೂ ಬೇಜಾರಿಲ್ಲ ಎಂದರು ಈಶ್ವರಪ್ಪ. ಈಶ್ವರಪ್ಪ ಭಾಷಣದಲ್ಲಿ ಹಿಂದುತ್ವ, ರಾಷ್ಟ್ರೀಯತೆ, ಮೋದಿ ಶಬ್ದಗಳು ಬಂದಾಗಲೆಲ್ಲ ಸಭೆಯಿಂದ ಚಪ್ಪಾಳೆ ಸುರಿಮಳೆ ಕೇಳಿ ಬಂದರೆ, ಅಶ್ಲೀಲ ಪದಪ್ರಯೋಗ ಮಾಡುತ್ತಿದ್ದಂತೆ ಇದ್ದಕ್ಕಿದ್ದಂತೆ ಬಿಜೆಪಿ ಸಭೆಯಲ್ಲಿ ಮೌನ ಆವರಿಸಿತು.
Eshwarappa lashes out Siddaramaiah using Vulgar words at Puttur.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am