ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm