ಬ್ರೇಕಿಂಗ್ ನ್ಯೂಸ್
14-03-23 10:58 pm Mangalore Correspondent ಕರಾವಳಿ
ಮಂಗಳೂರು, ಮಾ.14: ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು, ಕುಂದಾಪುರದ ಉದ್ಯಮಿ ರಾಮಕೃಷ್ಣ ಆಚಾರ್ ಮತ್ತು ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.
ಮೂಲತಃ ಮರದ ವ್ಯಾಪಾರಿಯಾಗಿದ್ದ ಕಣಚೂರು ಮೋನು, ಮೊದಲಿಗೆ ನಾಟೆಕಲ್ ನಲ್ಲಿ ಕಣಚೂರು ವುಡ್ ಇಂಡಸ್ಟ್ರೀಸ್ ಹೊಂದಿದ್ದರು. ಆನಂತರ ಸಿರಿವಂತಿಕೆ ಗಳಿಸಿ 2002ರಲ್ಲಿ ಕಣಚೂರು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದರು. ಶಿಕ್ಷಣ ಸಂಸ್ಥೆಯೀಗ ಮೆಡಿಕಲ್ ಕಾಲೇಜು, ಆಸ್ಪತ್ರೆಯಾಗಿ ಬದಲಾಗಿದ್ದು ತಂದೆ- ಮಗ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಕಣಚೂರು ಮೋನು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ. ಇವರನ್ನು 2023ರ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯವರಾದ ರಾಮಕೃಷ್ಣ ಆಚಾರ್ ಬಡ ಕುಟುಂಬದಲ್ಲಿ ಜನಿಸಿ ಸಾಧನೆ ಮಾಡಿದವರು. ಕೇವಲ 25 ಸಾವಿರ ಬಂಡವಾಳದಲ್ಲಿ ಫ್ಯಾಬ್ರಿಕೇಶನ್ ವೃತ್ತಿ ಆರಂಭಿಸಿದ ಅವರು ಈಗ ಕೃಷಿ, ನೀರು ನಿರ್ವಹಣೆ ಮತ್ತು ಒಳಚರಂಡಿ ಸಂಸ್ಕರಣೆ ಕ್ಷೇತ್ರದಲ್ಲಿ ವರ್ಷಕ್ಕೆ 250 ಕೋಟಿ ವಹಿವಾಟು ನಡೆಸುತ್ತಾರೆ. ಇವರ ಎಲಿಕ್ಸಿರ್ ಬ್ರಾಂಡ್ ವಾಟರ್ ಪ್ಯೂರಿಫೈಯರ್ ದೇಶಾದ್ಯಂತ ನೀರು ವಿತರಿಸಲು ಪ್ರಮಾಣಿತ ಸಾಧನವಾಗಿ ಹೆಸರು ಮಾಡಿದೆ. ಕಾರ್ಕಳ ತಾಲೂಕಿನ ಮುನಿಯಾಲಿನಲ್ಲಿ 35 ಎಕರೆ ಪ್ರದೇಶದಲ್ಲಿ ಗೋಧಾಮ ನಡೆಸುತ್ತಿದ್ದಾರೆ.
ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನಿವೃತ್ತರಾದ ಎಂಬಿ ಪುರಾಣಿಕ್ ಸಮಾಜದ ವಿವಿಧ ಸ್ತರಗಳಲ್ಲಿ ದುಡಿದು ಸಾಧನೆ ಮಾಡಿದ್ದಾರೆ. ಮಂಗಳೂರು, ತಲಪಾಡಿಯಲ್ಲಿ ಶಾರದಾ ವಿದ್ಯಾಸಂಸ್ಥೆಗಳು ಸೇರಿದಂತೆ ವಿವಿಧ ಕಡೆ ಹಲವು ಸಂಸ್ಥೆಗಳನ್ನು ಹುಟ್ಟುಹಾಕಿದ್ದಾರೆ. ವಿಶ್ವ ಹಿಂದು ಪರಿಷತ್ತಿನಲ್ಲಿ ತೊಡಗಿಕೊಂಡಿರುವ ಪುರಾಣಿಕ್ ಅವರನ್ನು ಈ ಬಾರಿ ಮಂಗಳೂರು ವಿವಿಯು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ. ಮೇಲಿನ ಮೂವರು ಕೂಡ ಸಿರಿವಂತರಾಗಿದ್ದು, ಸಮಾಜದಲ್ಲಿ ಹೆಸರು ಮಾಡಿದವರು. ಇತ್ತೀಚಿನ ವರ್ಷಗಳಲ್ಲಿ ಗೌರವ ಡಾಕ್ಟರೇಟ್ ಪದವಿಗಳನ್ನು ಕೆಲವು ವಿಶ್ವವಿದ್ಯಾನಿಲಯಗಳು ಮಾರಾಟ ಮಾಡುತ್ತವೆ ಎಂಬ ಆರೋಪ ಕೇಳಿಬಂದಿತ್ತು. ಎರಡು ದಿನಗಳ ಹಿಂದೆ ಸುದ್ದಿಗೋಷ್ಟಿ ನಡೆಸಿದ್ದ ಮಂಗಳೂರು ವಿವಿ ಕುಲಪತಿ ಎಡಪಡಿತ್ತಾಯ ಅವರನ್ನು ಈ ಬಗ್ಗೆ ಕೇಳಿದಾಗ, ಅದೆಲ್ಲ ಸುಳ್ಳು. ಆಧಾರ ರಹಿತ ಎಂದಿದ್ದರು.
The Mangalore University will confer honorary doctorate on Vishwa Hindu Parishad leader and chairman of Sharada Group of Educational Institutions M.B. Puranik, Congress leader and chairman of Kanachur Institute of Medical Sciences U.K. Monu, and entrepreneur G. Ramakrishna Achar, during the 41st convocation of Mangalore University on Wednesday.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm