ಬ್ರೇಕಿಂಗ್ ನ್ಯೂಸ್
16-03-23 01:15 pm Mangalore Correspondent ಕರಾವಳಿ
ಮಂಗಳೂರು, ಮಾ.16 : ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಾವು ಅವರ ಯೋಜನೆ ಬಗ್ಗೆ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅಲ್ಲ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಎಂದು ಹೇಳಿದ್ದಾರೆ.
ಮಂಗಳೂರಿನ ಹೆಲಿ ಪ್ಯಾಡ್ ನಲ್ಲಿ ಈ ಕುರಿತ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಉತ್ತರಿಸಿದರು. ಸೋಮಣ್ಣ- ಯಡಿಯೂರಪ್ಪ ವೈಮನಸ್ಸಿನ ಕುರಿತ ಪ್ರಶ್ನೆಗೆ, ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ. ಅವರು ದೆಹಲಿಗೆ ವೈಯಕ್ತಿಕ ಕಾರಣದಿಂದಷ್ಟೆ ಹೋಗಿದ್ದಾರೆ. ಯಾವುದೇ ಭಿನ್ನಾಭಿಪ್ರಾಯವನ್ನು ಅವರು ಹೊಂದಿಲ್ಲ. ಯಡಿಯೂರಪ್ಪ ಅವರು ಎಲ್ಲರಿಗಿಂತ ಎತ್ತರದ ಲೀಡರ್ ಎಂದು ಹೇಳಿದರು.
ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ಉಂಟಾಗುತ್ತಿರುವ ಪ್ರಶ್ನೆಗೆ, ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀಳುತ್ತದೆ. ಬೆಂಕಿ ನಂದಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಡಿಸಿಗಳ ಜೊತೆ ಸಭೆಯನ್ನು ಮಾಡಿದ್ದೇನೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ ನಂದಿಸಲು ಹೆಲಿಕಾಪ್ಟರ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.
ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಟೋಲ್ ಸಂಗ್ರಹಕ್ಕೆ ಕಾಂಗ್ರೆಸ್ ವಿರೋಧ ಕುರಿತ ಪ್ರಶ್ನೆಗೆ, ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಟೋಲ್ ಆಗಿಲ್ವಾ? ಕೆಟ್ಟ ಪರಂಪರೆ ಕಾಂಗ್ರೆಸ್ ನದ್ದು. ಸಮಸ್ಯೆ ಇದ್ದರೆ ಕೂತು ಬಗೆಹರಿಸಿಕೊಳ್ಳಬಹುದು. ಕಾಂಗ್ರೆಸ್ ಸಭ್ಯತೆಯ ದಿವಾಳಿತನ ತೋರಿಸಿದೆ ಎಂದು ಟೀಕಿಸಿದರು.
ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿರುವ ಕುರಿತು ಕೇಳಿದ್ದಕ್ಕೆ, ಕುಡಿಯುವ ನೀರಿನ ವಿಚಾರದಲ್ಲಿ ಟಾಸ್ಕ್ ಫೊರ್ಸ್ ಮಾಡಲಾಗಿದೆ. ನೀರಿಗಾಗಿ ಕೆಲವು ಕಡೆ ತುಂಬಾ ಸಮಸ್ಯೆಗಳಿವೆ. ಕೆಲವು ಭಾಗದಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗಿದೆ. ಈ ಬಗ್ಗೆ ವರದಿ ತರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಬಿಜೆಪಿಯಲ್ಲಿ ಹಿರಿಯ ಶಾಸಕರಿಗೆ ಟಿಕೆಟ್ ಇಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡೋದು ಅವರ ಪಕ್ಷಕ್ಕೆ ಬಿಟ್ಟಿದ್ದು. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರವಾಗಿ ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ನಿರ್ಧಾರ ಕೈಗೊಳ್ಳಲಿದೆ ಎಂದರು.
Cm Bommai slams congress on Guarantee card in Mangalore, it's just a visiting card no Guarantee for the people he added. There is no guarantee for their words.
28-06-25 12:14 pm
HK News Desk
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm