ಬ್ರೇಕಿಂಗ್ ನ್ಯೂಸ್
23-10-20 10:24 pm Mangalore Reporter ಕರಾವಳಿ
ಮಂಗಳೂರು. ಅಕ್ಟೋಬರ್ .23 : ಅಕ್ರಮ ಗೋಹತ್ಯೆಗೆ ನಿಯಂತ್ರಣ ಹೇರುವ ಪ್ರಯತ್ನವಾಗಿ ಮಂಗಳೂರು ಮಹಾನಗರಪಾಲಿಕೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇರುವ 20 ಬೀಫ್ ಸ್ಟಾಲ್ ಗಳಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯಿಂದ ಆದೇಶ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಪ್ರಕಟಣೆ ಹೇಳಿದೆ.

ಅನಧಿಕೃತವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ರದ್ದು ಪಡಿಸಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು.
ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೆಹಿಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm