ಬ್ರೇಕಿಂಗ್ ನ್ಯೂಸ್
18-03-23 07:41 pm Mangalore Correspondent ಕರಾವಳಿ
ಮಂಗಳೂರು, ಮಾ.18: ಗುಳಿಗ ದೈವಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವಮಾನಿಸಿದ್ದನ್ನು ಖಂಡಿಸಿ ತೀರ್ಥಹಳ್ಳಿಯಿಂದ ಕಾಂಗ್ರೆಸ್ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಅಭಿಮಾನಿಗಳು 50ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮಂಗಳೂರಿಗೆ ವಾಹನ ಜಾಥಾ ಆಗಮಿಸಿದ್ದಾರೆ.
ಮಂಗಳೂರಿನ ಪಚ್ಚನಾಡಿ ಬಳಿಯ ಬಂದಲೆಯ ಶ್ರೀಮಂತ ರಾಜಗುಳಿಗ ದೈವದ ಸನ್ನಿಧಿಯಲ್ಲಿ ಪ್ರಾರ್ಥನೆ ನೆರವೇರಿಸಿದ್ದಾರೆ. ದೈವಸ್ಥಾನದ ಎದುರು ಹರಿಕೆ ಮಾಡಿದ ಭಕ್ತರು, ಆರಗ ಜ್ಞಾನೇಂದ್ರ ಅವರು ಗುಳಿಗ ದೈವಕ್ಕೆ ಅವಮಾನ ಮಾಡಿದ್ದಾರೆ. ಆಮೂಲಕ ತೀರ್ಥಹಳ್ಳಿಯ ಜನತೆಗೆ ಮತ್ತು ಕರಾವಳಿಯ ದೈವದ ಆರಾಧಕರಿಗೆ ಅವಮಾನ ಮಾಡಿದ್ದಾರೆ. ಅದಕ್ಕಾಗಿ ಗುಳಿಗ ದೈವವೇ ತನ್ನ ಕಾರಣಿಕ ತೋರಿಸಬೇಕು. ಶಿಕ್ಷೆ ಕೊಡು ಎಂದು ಬೇಡುವುದಿಲ್ಲ. ಅವರಿಗೆ ಒಳ್ಳೆಯ ಬುದ್ಧಿ ಕೊಡು ಎಂದು ಹೇಳುತ್ತೇವೆ. ಅಲ್ಲದೆ, ತನ್ನ ಶಕ್ತಿಯ ಮೂಲಕ ಪರಿಣಾಮ ತೋರಿಸಬೇಕು ಎಂದು ಕೇಳಿಕೊಳ್ಳುತ್ತೇವೆ ಎಂದಿದ್ದಾರೆ.


ಅಲ್ಲದೆ, ನಾವು ಕಾಂಗ್ರೆಸ್ ಕಾರ್ಯಕರ್ತರೆಂದು ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ದೈವದ ಬಗ್ಗೆ ಭಕ್ತಿಯಿಟ್ಟು ಬಂದಿದ್ದೇವೆ. ತೀರ್ಥಹಳ್ಳಿಯ ಜನರ ಪರವಾಗಿ ಬಂದಿದ್ದೇವೆ. ನಾವು ಶಿವದೂತೆ ಗುಳಿಗೆ ನಾಟಕವನ್ನು ಮಾಡಿಸಿದ್ದೆವು. ಮೊನ್ನೆ 16 ಸಾವಿರ ಜನ ಸೇರಿದ್ದರು. ನಾಟಕವನ್ನು ನೋಡಿ ಆನಂದಿಸಿದ್ದಾರೆ, ದೈವದ ಕಾರಣಿಕ ನೋಡಿದ್ದಾರೆ. ಮುಂದೆ ಗುಳಿಗ ದೈವ ಅನುಗ್ರಹಿಸಿದರೆ ಇದಕ್ಕಿಂತ ದೊಡ್ಡ ರೀತಿಯಲ್ಲಿ ಅದೇ ನಾಟಕ ಆಯೋಜಿಸುತ್ತೇವೆ. 32 ಸಾವಿರ ಜನರನ್ನು ಸೇರಿಸುತ್ತೇವೆ. ಆದರೆ ಗುಳಿಗ ದೈವಕ್ಕೆ ಅಪಮಾನ ಮಾಡಿದ, ಗುಳಿಗನಿಗೆ ಜಾಪಾಳ ಗುಳಿಗೆ ಎಂದು ಅಣಕಿಸಿದ ಆರಗ ಜ್ಞಾನೇಂದ್ರ ತುಳುನಾಡಿನ ಯಾವುದಾದ್ರೂ ಗುಳಿಗನ ಕ್ಷೇತ್ರಕ್ಕೆ ಬಂದು ತಪ್ಪು ಯಾಚನೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.
ತೀರ್ಥಹಳ್ಳಿಯ ಕಿಮ್ಮನೆ ರತ್ನಾಕರ್ ಅಭಿಮಾನಿ ಬಳಗದ ಜೊತೆಗೆ ಜಿಲ್ಲಾ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೂಡ ಈ ಸಂದರ್ಭದಲ್ಲಿ ಜೊತೆಗಿದ್ದರು.
Insult to #Daiva, #Congress leaders pray to Daiva in Mangalore to punish #homeminister #AragaJnanendra by holding a rally from #Thirthahalli to #Mangalore. Jnanendra recently insulted ‘Guliga daiva’ during a programme organised at #Thirthahalli. pic.twitter.com/uHa5RQK6i5
— Headline Karnataka (@hknewsonline) March 18, 2023
Insult to Daiva, Congress leaders pray to Daiva in Mangalore to punish home minister Araga Jnanendra by holding a rally from Thirthahalli to Mangalore. Jnanendra recently insulted ‘Guliga daiva’ during a programme organised at Thirthahalli.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm