ಬ್ರೇಕಿಂಗ್ ನ್ಯೂಸ್
20-03-23 11:06 pm Mangalore Correspondent ಕರಾವಳಿ
ಉಳ್ಳಾಲ, ಮಾ.20 : ಉಳ್ಳಾಲದಲ್ಲಿ ಸಾಮರಸ್ಯದ ಹೆಸರಲ್ಲಿ ಭಯೋತ್ಪಾದಕರು, ಪಿಎಫ್ ಐ, ಎಸ್ಡಿಪಿಐ ಜೊತೆ ಒಳ ಸಂಬಂಧ ಇಟ್ಟವರನ್ನ ಈ ಬಾರಿ ಮನೆಗೆ ಕಳುಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ನೀಡಿದರು.
ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಮಂಗಳೂರು ವಿಧಾನಸಭೆ ಕ್ಷೇತ್ರದ ಕೊಲ್ಯದಲ್ಲಿ ಸೋಮವಾರ ನಡೆದ "ಯುವ ಸಮಾವೇಶ" ಉದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಆಡಳಿತದಲ್ಲಿ ಮೂರು ಕೊಡುಗೆ ನೀಡಿದ್ದಾರೆ. ಅದು ಭ್ರಷ್ಟಾಚಾರ, ಭಯೋತ್ಪಾದನೆ, ಪರಿವಾರ ರಾಜಕಾರಣ. ಕಾಶ್ಮೀರದಲ್ಲಿ ಭಾರತ್ ಮಾತಾ ಕಿ ಜೈ ಅಂತ ಹೇಳುವ ಹಾಗಿರಲಿಲ್ಲ. ಅದಕ್ಕಾಗಿ ಮುರಳಿ ಮನೋಹರ್ ಜೋಶಿಯವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಯಾತ್ರೆಯಲ್ಲಿ ಜೋಶಿಯವರ ಜೊತೆಯಾಗಿ ನಿಂತವರು ಈಗಿನ ಪ್ರಧಾನಿ ನರೇಂದ್ರ ಮೋದಿ. ಭಾರತ್ ಜೋಡೋ ಮಾಡಿದ್ದು ರಾಹುಲ್ ಗಾಂಧಿಯಲ್ಲ ನರೇಂದ್ರ ಮೋದಿಯವರು. ಸಿದ್ದರಾಮಯ್ಯನವರು 40% ಕಮೀಷನ್ ಸರಕಾರ ಎಂದು ಹೇಳುತ್ತಾರೆ. ಆದರೆ ನಿಮ್ಮ ಪಕ್ಷದ ಸೋನಿಯಾ ಗಾಂಧಿ ಜಾಮೀನಿನ ಮೇಲೆ ಇದ್ದಾರೆ. ನಿಮ್ಮ ರಾಜ್ಯಾಧ್ಯಕ್ಷ ತಿಹಾರ್ ಜೈಲಿಗೆ ಹೋಗಿ ಬಂದದ್ದು ಯಾಕೆ ಎಂದು ಪ್ರಶ್ನಿಸಿದರು.








ನರೇಂದ್ರ ಮೋದಿಯವರ ಆಡಳಿತದಲ್ಲಿ ಯಾವುದೇ ಹಳ್ಳಿಯಲ್ಲಿಯೂ ಬಾಂಬ್ ಸ್ಫೋಟವಾಗಲಿಲ್ಲ. ಆದರೆ ಮಂಗಳೂರಿಗೆ ಕುಕ್ಕರ್ ಹಿಡಿದುಕೊಂಡು ಬಂದ ವ್ಯಕ್ತಿಯನ್ನು ಬಂಧಿಸಿದಾಗ ಡಿಕೆಶಿಯವರಿಗೆ ಕಣ್ಣೀರು ಬಂತು. ಆದರೆ ಹಿಂದೂಗಳ ಹತ್ಯೆಯಾದಾಗ, ಗೋವುಗಳ ಹತ್ಯೆಯಾದಾಗ ಅವರಿಗೆ ಕಣ್ಣೀರು ಬರಲಿಲ್ಲ. ಡಿಕೆಶಿ ಯವರಿಗೆ 2 ಕುಕ್ಕರ್ ಮೇಲೆ ಪ್ರೀತಿ. ಮೊದಲನೆಯದು ಬೆಳಗಾವಿಯ ಕುಕ್ಕರ್ ಮತ್ತೊಂದು ಮಂಗಳೂರಿನ ಕುಕ್ಕರ್ ಎಂದು ಲೇವಡಿ ಮಾಡಿದರು.





ಅಣ್ಣಾಮಲೈ ಗೈರು, ಕಾರ್ಯಕರ್ತರಿಗೆ ನಿರಾಸೆ
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರು ಯುವ ಸಮಾವೇಶಕ್ಕೆ ದಿಕ್ಸೂಚಿ ಭಾಷಣಕಾರರಾಗಿ ಬರುವುದೆಂದು ಬಹುತೇಖ ಖಚಿತವಾಗಿತ್ತು. ಅದಕ್ಕಾಗಿ ಅದ್ದೂರಿ ವೇದಿಕೆಯನ್ನೂ ರೆಡಿ ಮಾಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಅಣ್ಣಾಮಲೈ ಮತ್ತು ಬಿ.ವೈ ವಿಜಯೇಂದ್ರ ಸಮಾವೇಶಕ್ಕೆ ಗೈರಾದ ಕಾರಣ ಸಮಾವೇಶದ ಜೋಷ್ ಕಡಿಮೆಯಾಗಿತ್ತು. ನೆರೆದಿದ್ದ ಕಾರ್ಯಕರ್ತರು ಅಣ್ಣಾಮಲೈ ಬಾರದೆ ಇದ್ದುದರಿಂದ ಸಭೆಯನ್ನು ಅರ್ಧದಲ್ಲೇ ಬಿಟ್ಟು ಹೊರ ನಡೆದರು. ರಾಜ್ಯಾಧ್ಯಕ್ಷ ನಳಿನ್ ಭಾಷಣ ಮಾಡುವ ವೇಳೆ ಮುಂದಿನ ಸಾಲು ಬಿಟ್ಟರೆ ಹಿಂದಿನ ಕುರ್ಚಿಗಳೆಲ್ಲ ಖಾಲಿಯಾಗಿದ್ದವು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸಂತೋಷ್ ಬೋಳಿಯಾರ್, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.
Mangalore Ullal Yuva Samavesha, Nalin Kateel slams Congress over close link with SDPI.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am