ಬ್ರೇಕಿಂಗ್ ನ್ಯೂಸ್
20-03-23 11:14 pm Mangalore Correspondent ಕರಾವಳಿ
ಮಂಗಳೂರು, ಮಾ.21 : ರಾಜ್ಯ ಬಿಜೆಪಿ ಸರಕಾರದ ಆಯಸ್ಸು ಇನ್ನು ಇರೋದು 35 ದಿನಗಳು ಮಾತ್ರ, ಉಳಿದಿರುವ ದಿನಗಳಲ್ಲಾದರೂ ಜನರ ಪರವಾಗಿ ಕೆಲಸ ಮಾಡಿ ತನ್ನ ಮೇಲಿನ ಕಪ್ಪು ಚುಕ್ಕೆಯನ್ನು ಕ್ಲೀನ್ ಮಾಡುವ ಬದಲು ಸರಕಾರಿ ಆಡಳಿತ ಯಂತ್ರದ ಅಂಗಡಿ ಬಂದ್ ಮಾಡಿ ಚುನಾವಣೆ ಪ್ರಚಾರದಲ್ಲಿ ನಿರತವಾಗಿದೆ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಪೌರ ಕಾರ್ಮಿಕರ ಸಮಸ್ಯೆ, ನೀರಿನ ಸಮಸ್ಯೆಯಿಂದ ಜನರು ಹತಾಶರಾಗಿದ್ದಾರೆ, ಆಡಳಿತ ವಹಿಸ್ಕೊಂಡವರು ಮಾತ್ರ ನಿರ್ಲಕ್ಷ್ಯ ಧೋರಣೆಯನ್ನು ಮುಂದಿವರಿಸಿದ್ದಾರೆ, ಒಂದು ವಾರದಿಂದ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರ ಪ್ರತಿಭಟನೆಯಿಂದಾಗಿ ನಗರದಲ್ಲಿ ಸ್ವಚ್ಛತೆ ಜತೆಗೆ ಆರೋಗ್ಯದ ಸಮಸ್ಯೆ ಆತಂಕ ಎದುರಾಗಿದೆ. ಎಲ್ಲ ವಿಭಾಗದ ನೌಕರರು ಈಗ ಪ್ರತಿಭಟನೆ ನಡೆಸುವ ಹಂತಕ್ಕೆ ಬಂದಿದ್ದಾರೆ.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಮಂಗಳೂರು ವಿವಿಯ ಪದವಿ ತರಗತಿಗಳ ಫಲಿತಾಂಶ ಬಾರದೆ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಆರ್ಟಿಓ ಕಚೇರಿಗೆ ಹೋದರೆ ಅಲ್ಲಿ ಆರ್ಸಿ ಪ್ರಿಂಟ್ ಮಾಡುವ ಕಾರ್ಡ್ ಗೂ ಗತಿಯಿಲ್ಲ. ಬಿಜೆಪಿ ಸರಕಾರ ನಡೆಸುವ ಮಂದಿ ನಲ್ವತ್ತು ಪರ್ಸೆಂಟಿನ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತರಾಗಿದ್ದಾರೆ ಎಂದು ಯು.ಟಿ.ಖಾದರ್ ಹೇಳಿದರು.
ಉರಿಗೌಡ ನಂಜೇಗೌಡರ ಕುರಿತ ಪ್ರಶ್ನೆಗೆ, ಅವರು ಯಾರು ಅಂತಲೇ ಗೊತ್ತಿಲ್ಲ ಎಂದರು. ಟಿಪ್ಪು ಕುರಿತ ಪಠ್ಯದಲ್ಲಿ ಆತನನ್ನು ಬ್ರಿಟಿಷರು ಕೊಂದಿದ್ದು ಅಂತ ಇದೆ. ಅದು ಬಿಟ್ಟರೆ ಬೇರೆ ಯಾವುದೇ ಇತಿಹಾಸ ಓದಿಲ್ಲ ಎಂದರು. ಕಳ್ಳಿಗೆ ತಾರನಾಥ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Bjp will be alive for another 35 days only mocks UT Khader in Mangalore.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am