ಬ್ರೇಕಿಂಗ್ ನ್ಯೂಸ್
21-03-23 09:00 pm Mangalore Correspondent ಕರಾವಳಿ
ಮಂಗಳೂರು, ಮಾ.21 : ಆರ್.ಟಿ.ಐ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು ಏಳು ವರ್ಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ ಜನಪ್ರತಿನಿಧಿ ಈವರೆಗೂ ಬಾಳಿಗಾ ಮನೆಗೆ ಭೇಟಿ ನೀಡಲಿಲ್ಲ. ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಲಿಲ್ಲ. ಸರಕಾರದಿಂದ ಕನಿಷ್ಟ ಪರಿಹಾರವನ್ನೂ ಒದಗಿಸಿ ಕೊಡಲಿಲ್ಲ. ಇತ್ತೀಚೆಗೆ ಹರ್ಷ ಮತ್ತು ಪ್ರವೀಣ್ ನೆಟ್ಟಾರು ಸಾವಿಗೆ ಸ್ಪಂದಿಸಿದ ಸಂಘ ಪರಿವಾರ, ಬಿಜೆಪಿ ಸರಕಾರ ತಮ್ಮದೇ ಸಂಘಟನೆಯ ಕಾರ್ಯಕರ್ತ ವಿನಾಯಕ ಬಾಳಿಗಾ ಸಾವಿಗೆ ಯಾಕಾಗಿ ಸ್ಪಂದಿಸಿಲ್ಲ ಎಂದು ಪ್ರೊ. ನರೇಂದ್ರನಾಯಕ್ ಪ್ರಶ್ನೆ ಮಾಡಿದ್ದಾರೆ.
ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆಗೆ ಮಾರ್ಚ್ 21ಕ್ಕೆ ಏಳು ವರ್ಷ ಸಂದಿದ್ದು ವೆಂಕಟರಮಣ ದೇವಸ್ಥಾನದಿಂದ ಕಲಾಕುಂಜ ಬಳಿಯ ಬಾಳಿಗಾ ಮನೆಯ ವರೆಗೆ ನಡೆದ ಮೆರವಣಿಗೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೇರಿದ ಬಿಜೆಪಿ ನಾಯಕರು, ಹಿಂದುಗಳಿಗೆ ಏನೇ ಅನ್ಯಾಯವಾದರೂ ಸಹಿಸೋದಿಲ್ಲ ಎಂದು ರೋಷ ತೋರುತ್ತಾರೆ. ಆದರೆ ಬಾಳಿಗಾ ಸಾವಿಗೆ ನ್ಯಾಯ ಒದಗಿಸಲು ಯಾಕೆ ರೋಷ ಹುಟ್ಟಲಿಲ್ಲ? ಅದೇ ಸಮುದಾಯದ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಬಾಳಿಗಾ ಮನೆಗೆ ಈವರೆಗೂ ಭೇಟಿ ನೀಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.



ಸಭೆಯನ್ನು ಉದ್ದೇಶಿಸಿ ಖ್ಯಾತ ಮನೋವೈದ್ಯರಾದ ಪಿ.ವಿ ಭಂಡಾರಿ, ನಾಗರಿಕ ಸೇವಾಟ್ರಸ್ಟ್ ನ ಸೋಮನಾಥ ನಾಯಕ್ , ಡಿಎಸ್ಎಸ್ ನ ಹಿರಿಯ ಮುಖಂಡರಾದ ಎಂ.ದೇವದಾಸ್ ಮಾತನಾಡಿದರು. ವಿನಾಯಕ ಬಾಳಿಗಾರ ಸಹೋದರಿಯರಾದ ಅನುರಾಧ ಬಾಳಿಗ, ಹರ್ಷ ಬಾಳಿಗ , ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್ , ಮಾಜಿ ಕಾರ್ಪೊರೇಟರ್ ಗಳಾದ ಪ್ರಕಾಶ್ ಸಾಲ್ಯಾನ್, ಪದ್ಮನಾಭ ಅಮೀನ್, ಸಾಮರಸ್ಯ ಬಳಗದ ಮಂಜುಳಾ ನಾಯಕ್, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್, ಸುನೀಲ್ಕುಮಾರ್ ಬಜಾಲ್, ಸಂತೋಷ್ ಬಜಾಲ್, ರಘು ಎಕ್ಕಾರ್, ಸರೋಜಿನಿ, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು, ಅಸುಂತ ಡಿಸೋಜ, ಪ್ರಮೀಳಾ ದೇವಾಡಿಗ, ರೇವಂತ್ ಕದ್ರಿ, ವಿನೀತ್ ದೇವಾಡಿಗ, ಸಂಜನಾ ಛಲವಾದಿ, ಜೆರಾಲ್ಡ್ ಟವರ್, ನೀರಜ್ ಪಾಲ್, ಟಿ. ಸಿ ಗಣೇಶ್, ನಿತಿನ್ ಕುತ್ತಾರ್, ವಾಸುದೇವ ಉಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು.
Mangalore RTI activist Vinayak Baliga murder case, why govt has no interest as like praveen nettaru, slams Narendra Nayak. Vinayak Baliga was hacked to death near his house in Kodailbail in the city on March 21, 2016. Police filed chargesheet against Naresh Shenoy, Shrikant, Shivaprasad, Vinit Poojary, Nishit Devadiga, Shailesh and Manjunath Shenoy. The case against another accused Vignesh Nayak got abated following his suicide in November 2020.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am