ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm