ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm