ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm