ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm