ಬ್ರೇಕಿಂಗ್ ನ್ಯೂಸ್
22-03-23 03:26 pm Mangaluru Correspondent ಕರಾವಳಿ
ಮಂಗಳೂರು, ಮಾ.22: ನಗರದ ಪಂಪ್ವೆಲ್ ಮೇಲ್ಸೇತುವೆಯ ಒಂದು ಭಾಗದಲ್ಲಿ ರಸ್ತೆ ಕುಗ್ಗುತ್ತಾ ಹೋಗಿದ್ದರಿಂದ ಹೆದ್ದಾರಿ ಇಲಾಖೆಯಿಂದ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ ಎಕ್ಕೂರು ಕಡೆಯಿಂದ ಮೇಲ್ಸೇತುವೆಗೆ ಎಂಟ್ರಿ ಕೊಡುವಲ್ಲಿ ರಸ್ತೆಯನ್ನು ಬ್ಲಾಕ್ ಮಾಡಿಸಿ ಹೆಚ್ಚುವರಿಯಾಗಿ ಡಾಮರು ಹಾಕಲಾಗಿದೆ.
ನಂತೂರಿನಿಂದ ಮೇಲ್ಸೇತುವೆ ಕಳೆದು ಇಂಡಿಯಾನ ಆಸ್ಪತ್ರೆಯ ಮುಂಭಾಗದ ಪ್ರದೇಶದಲ್ಲಿ ರಸ್ತೆಯ ತಳಪಾಯ ಕುಸಿದಿದ್ದು, ಕುಗ್ಗುತ್ತಾ ಹೋಗಿತ್ತು. ಇದರಿಂದಾಗಿ ಮಳೆ ನೀರು ನಿಲ್ಲುವುದು ಒಂದೆಡೆಯಾದರೆ, ವೇಗದಲ್ಲಿ ಬರುತ್ತಿದ್ದ ವಾಹನಗಳು ಅಲ್ಲಿ ಕುಸಿತದಿಂದಾಗಿ ಉಂಟಾಗಿದ್ದ ಕೃತಕ ಹಂಪ್ಸ್ ನಿಂದ ಅಪಘಾತಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ರಸ್ತೆಯ ಎರಡೂ ಭಾಗದಲ್ಲಿ ರಸ್ತೆಯನ್ನು ಮತ್ತೊಮ್ಮೆ ಡಾಮರು ಹಾಕಿಸಿ ಎತ್ತರಿಸಿದ್ದಾರೆ.




ರಸ್ತೆಯ ತಳಪಾಯದ ಕೆಲಸ ಸರಿಯಾಗಿ ಆಗದೇ ಇರುವುದು ಈ ರೀತಿ ಕುಸಿಯಲು ಕಾರಣ. ಕಳಪೆ ಕಾಮಗಾರಿ, ಪಂಪ್ವೆಲ್ ಸೇತುವೆಯ ಕೆಲಸ ವಿಳಂಬವಾಗಿದ್ದಕ್ಕೆ ವಿರೋಧಿ ಕೂಗೆದ್ದಿದ್ದರಿಂದ ಎರಡು ವರ್ಷಗಳ ಹಿಂದೆ ತುರ್ತಾಗಿ ಬಿಟ್ಟು ಕೊಡಲಾಗಿತ್ತು. ಈಗ ಎರಡೇ ವರ್ಷದಲ್ಲಿ ರಸ್ತೆಯ ಭಾಗ ಕುಸಿದು ನಿಂತಿದ್ದು ಅಲ್ಲಿ ಡಾಮರು ಹಾಕಿ ಎತ್ತರಿಸಲಾಗಿದೆ. ರಸ್ತೆಯ ಉದ್ದಕ್ಕೂ ಆ ರೀತಿಯ ಉಬ್ಬು ತಗ್ಗುಗಳಿದ್ದು, ವಾಹನ ಸವಾರಿ ಸಂದರ್ಭ ಇದು ಅನುಭವಕ್ಕೆ ಬರುತ್ತದೆ. ಕಾಮಗಾರಿ ಸಲುವಾಗಿ ಮೇಲ್ಸೇತುವೆಯಲ್ಲಿ ವಾಹನಗಳನ್ನು ತಡೆದಿದ್ದರಿಂದ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
Road collapses at Pumpwell bridge in Mangalore, vehicles diverted to the service road
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am