ಬ್ರೇಕಿಂಗ್ ನ್ಯೂಸ್
22-03-23 09:02 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಹೊರ ಗುತ್ತಿಗೆ ನೌಕರರು, ಪೌರ ಕಾರ್ಮಿಕರು ತಮ್ಮ ನೇರ ನೇಮಕಾತಿ, ನೇರ ಪಾವತಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ನಗರ ಭಾಗದಲ್ಲಿ ತ್ಯಾಜ್ಯ ರಾಶಿ ಬೀಳುತ್ತಿದ್ದು ಮಂಗಳೂರು ಸ್ಮಾರ್ಟ್ ಸಿಟಿ ಗಬ್ಬು ನಾರುವಂತಾಗಿದೆ. ಅಪಾರ್ಟ್ಮೆಂಟ್, ಹೊಟೇಲ್ ಮುಂದೆ ರಾಶಿ ಬಿದ್ದ ತ್ಯಾಜ್ಯ ಸಂಗ್ರಹಕ್ಕೆ ಮಹಾನಗರ ಪಾಲಿಕೆಯಿಂದ ಪರ್ಯಾಯ ವ್ಯವಸ್ಥೆ ಮಾಡಿದರೂ, ರಸ್ತೆ ಬದಿಗಳಲ್ಲಿ ಕಸದ ರಾಶಿ ದಾರಿಹೋಕರ ಮೂಗಿಗೆ ವಿಚಿತ್ರ ವಾಸನೆ ಬಡಿಯತೊಡಗಿದೆ.
ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಮಂಗಳೂರಿನ ಪಾಲಿಕೆಯಲ್ಲಿ 60 ವಾರ್ಡ್ಗಳಿಗೆ ಕಸ ಸಂಗ್ರಹದ ಹೊಣೆಯನ್ನು ಆಯಾ ಭಾಗದ ಕಾರ್ಪೊರೇಟರ್ ಗಳಿಗೆ ವಹಿಸಲಾಗಿದೆ. ಹೀಗಾಗಿ ಕಾರ್ಪೊರೇಟರ್ ಉಸ್ತುವಾರಿಯಲ್ಲಿ ಕಸ ಸಂಗ್ರಹದ ವಾಹನಗಳು ಓಡಾಡಿದರೂ ಪೂರ್ತಿಯಾಗಿ ಕಸ ತೆಗೆಯಲು ಸಾಧ್ಯವಾಗುತ್ತಿಲ್ಲ. ಒಂದು ವಾರದಿಂದ ಕಸದ ರಾಶಿ ಬಿದ್ದಿರುವುದು, ಕೆಲವು ಕಡೆ ರಸ್ತೆ ಬದಿಗಳಲ್ಲಿ ಕಸವನ್ನು ಸುರಿಯುವ ಕೃತ್ಯ ಏರಿಕೆ ಕಂಡಿದೆ.

ದೊಡ್ಡ ಕಟ್ಟಡ, ಹೋಟೆಲ್, ಕೆಲವು ಅಪಾರ್ಟ್ಮೆಂಟ್ ಆಸುಪಾಸಿನಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿದ್ದು ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ಜೊತೆಗೆ, ಮನೆ ಮನೆಯ ಕಸ ಸಂಗ್ರಹವೂ ಆಗುತ್ತಿಲ್ಲ. ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಕಾಂಗ್ರೆಸ್ ಸೇರಿದಂತೆ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಕಗ್ಗಂಟು ಮಾಡಿದೆ.
ರಾಜ್ಯದೆಲ್ಲೆಡೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ, ಹೊರಗುತ್ತಿಗೆ ಕಾರ್ಮಿಕರ ಜತೆ ಮಾತುಕತೆ ನಡೆಸಿಕೊಂಡು ಮಹತ್ವದ ನಿರ್ಧಾರಗಳಿಗೆ ಆದೇಶ ಕೊಡಿಸುವ ಭರವಸೆ ನೀಡಿದ್ದಾರೆ. ಕಸದ ವಾಹನ ಚಾಲಕರು, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲರನ್ನು ನೇರಪಾವತಿಗೆ ತರಲು ಮಾ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿಅಂಗೀಕಾರ ಪಡೆಯಲಾಗುವುದು ಎಂದಿದ್ದಾರೆ.
Sanitation workers protest steps into 10th day, Mangalore city filled with garbage, residents face issues.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm