ಬ್ರೇಕಿಂಗ್ ನ್ಯೂಸ್
22-03-23 09:02 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಹೊರ ಗುತ್ತಿಗೆ ನೌಕರರು, ಪೌರ ಕಾರ್ಮಿಕರು ತಮ್ಮ ನೇರ ನೇಮಕಾತಿ, ನೇರ ಪಾವತಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ನಗರ ಭಾಗದಲ್ಲಿ ತ್ಯಾಜ್ಯ ರಾಶಿ ಬೀಳುತ್ತಿದ್ದು ಮಂಗಳೂರು ಸ್ಮಾರ್ಟ್ ಸಿಟಿ ಗಬ್ಬು ನಾರುವಂತಾಗಿದೆ. ಅಪಾರ್ಟ್ಮೆಂಟ್, ಹೊಟೇಲ್ ಮುಂದೆ ರಾಶಿ ಬಿದ್ದ ತ್ಯಾಜ್ಯ ಸಂಗ್ರಹಕ್ಕೆ ಮಹಾನಗರ ಪಾಲಿಕೆಯಿಂದ ಪರ್ಯಾಯ ವ್ಯವಸ್ಥೆ ಮಾಡಿದರೂ, ರಸ್ತೆ ಬದಿಗಳಲ್ಲಿ ಕಸದ ರಾಶಿ ದಾರಿಹೋಕರ ಮೂಗಿಗೆ ವಿಚಿತ್ರ ವಾಸನೆ ಬಡಿಯತೊಡಗಿದೆ.
ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಮಂಗಳೂರಿನ ಪಾಲಿಕೆಯಲ್ಲಿ 60 ವಾರ್ಡ್ಗಳಿಗೆ ಕಸ ಸಂಗ್ರಹದ ಹೊಣೆಯನ್ನು ಆಯಾ ಭಾಗದ ಕಾರ್ಪೊರೇಟರ್ ಗಳಿಗೆ ವಹಿಸಲಾಗಿದೆ. ಹೀಗಾಗಿ ಕಾರ್ಪೊರೇಟರ್ ಉಸ್ತುವಾರಿಯಲ್ಲಿ ಕಸ ಸಂಗ್ರಹದ ವಾಹನಗಳು ಓಡಾಡಿದರೂ ಪೂರ್ತಿಯಾಗಿ ಕಸ ತೆಗೆಯಲು ಸಾಧ್ಯವಾಗುತ್ತಿಲ್ಲ. ಒಂದು ವಾರದಿಂದ ಕಸದ ರಾಶಿ ಬಿದ್ದಿರುವುದು, ಕೆಲವು ಕಡೆ ರಸ್ತೆ ಬದಿಗಳಲ್ಲಿ ಕಸವನ್ನು ಸುರಿಯುವ ಕೃತ್ಯ ಏರಿಕೆ ಕಂಡಿದೆ.

ದೊಡ್ಡ ಕಟ್ಟಡ, ಹೋಟೆಲ್, ಕೆಲವು ಅಪಾರ್ಟ್ಮೆಂಟ್ ಆಸುಪಾಸಿನಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿದ್ದು ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ಜೊತೆಗೆ, ಮನೆ ಮನೆಯ ಕಸ ಸಂಗ್ರಹವೂ ಆಗುತ್ತಿಲ್ಲ. ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಕಾಂಗ್ರೆಸ್ ಸೇರಿದಂತೆ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಕಗ್ಗಂಟು ಮಾಡಿದೆ.
ರಾಜ್ಯದೆಲ್ಲೆಡೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ, ಹೊರಗುತ್ತಿಗೆ ಕಾರ್ಮಿಕರ ಜತೆ ಮಾತುಕತೆ ನಡೆಸಿಕೊಂಡು ಮಹತ್ವದ ನಿರ್ಧಾರಗಳಿಗೆ ಆದೇಶ ಕೊಡಿಸುವ ಭರವಸೆ ನೀಡಿದ್ದಾರೆ. ಕಸದ ವಾಹನ ಚಾಲಕರು, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲರನ್ನು ನೇರಪಾವತಿಗೆ ತರಲು ಮಾ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿಅಂಗೀಕಾರ ಪಡೆಯಲಾಗುವುದು ಎಂದಿದ್ದಾರೆ.
Sanitation workers protest steps into 10th day, Mangalore city filled with garbage, residents face issues.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am