ಬ್ರೇಕಿಂಗ್ ನ್ಯೂಸ್
23-03-23 10:00 pm Mangalore Correspondent ಕರಾವಳಿ
ಉಳ್ಳಾಲ, ಮಾ.23: ಉಳ್ಳಾಲ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ಲವ ಕುಶ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.
ಕಂಬಳ ಕರೆಯ ಬಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.25ರಂದು ಬೆಳಗ್ಗೆ ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿಗಳಾದ ವರ್ಕಾಡಿ ರಾಜೇಶ್ ತಾಳಿತ್ತಾಯರು ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದಾರೆ. ಕರೆಯನ್ನು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಉದ್ಘಾಟಿಸಲಿದ್ದಾರೆ ಎಂದರು.

ನರಿಂಗಾನ ಕಂಬಳ ಆಯೋಜನೆಯಿಂದ ಇಡೀ ಮಂಗಳೂರು ಕ್ಷೇತ್ರದಾದ್ಯಂತ ಸಂಭ್ರಮ ಸಡಗರ ಮನೆ ಮಾಡಿದೆ. ಪ್ರತಿ ಮನೆಗೆ ಜಾತ್ರೆಯಂತೆ ನೆಂಟರು ಸೇರಲಿದ್ದಾರೆ. ಕ್ಷೇತ್ರದ ಶಾಸಕನ ನೆಲೆಯಲ್ಲಿ ನನ್ನದೇ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಂಬಳ ಪಕ್ಷ, ಧರ್ಮ, ಜಾತಿ, ಬಡವ ಬಲ್ಲಿದ, ಮೇಲು ಕೀಳೆಂಬ ಭಾವನೆಯೇ ಸೃಷ್ಟಿಯಾಗಲು ಅವಕಾಶ ಕೊಡದ ಕಂಬಳ ಎಂದರು. ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಕಂಬಳದಲ್ಲಿ ಕಾನೂನು ಉಲ್ಲಂಘನೆ ಆಗದಂತೆ "ಪೇಟಾದ ನಿಯಮ ಪ್ರಕಾರ"ವೇ ಕಂಬಳ ನಡೆಸುವ ಸಲುವಾಗಿ ದಕ್ಷರನ್ನೊಳಗೊಂಡ ಕಂಬಳ ಪ್ರೇಮಿಗಳೇ ಇರುವ ಕಂಬಳ ಸಮಿತಿ ಹಾಗೂ ಇತರ ಉಪ ಸಮಿತಿ ರಚಿಸಲಾಗಿದೆ. ಕಂಬಳವನ್ನು 24 ಗಂಟೆ ಒಳಗೆ ಮುಗಿಸುವ ಯೋಜನೆ ಹಾಕಿಕೊಳ್ಳಲಾಗಿದೆ, ಹಾಗಿದ್ದರೂ ಯಾವುದಕ್ಕೂ ದೂರದ ಊರಿನಿಂದ ಬಂದು ಸೇರಲಿರುವ ಕೋಣಗಳ ಯಜಮಾನರ ಸಹಕಾರದ ನಿರೀಕ್ಷೆಯಲ್ಲಿದ್ದೇವೆ ಎಂದರು.
ತಲಪಾಡಿ ಕಂಬಳ, ಪೈವಳಿಕೆ ಕಂಬಳ ಈಗ ನಡೆಯುತ್ತಿಲ್ಲವಾದ್ದರಿಂದ ಕಾಸರಗೋಡಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೋಣಗಳ ಮಾಲೀಕರು ತಮ್ಮ ಅದೃಷ್ಟ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೋಣಗಳನ್ನು ಸ್ಪರ್ಧೆಗೆ ತರಲಿದ್ದಾರೆ. ದ.ಕ, ಉಡುಪಿ ಜಿಲ್ಲೆಗಳಿಂದ ಕೋಣಗಳು ಭಾರೀ ಸಂಖ್ಯೆಯಲ್ಲಿ ಜಮಾವಣೆ ಆಗಲಿದೆ. ಇತ್ತೀಚಿನ ದಿನಗಳಲ್ಲಿ ಕಂಬಳದಲ್ಲಿ ಪ್ರತಿಯೊಂದಕ್ಕೂ ಆಧುನಿಕ ತಂತ್ರಜ್ಞಾನ ಬಳಕೆ ಆಗುತ್ತಿರುವುದರಿಂದ ಫಲಿತಾಂಶದಲ್ಲಿ ಸಮಸ್ಯೆ ಉದ್ಭವವಾಗದಿರುವುದರಿಂದ ಸ್ಪರ್ಧೆಯು ಕಠಿಣವಾಗಿಯೂ ಬಹಳ ನಿಖರವಾದ ಫಲಿತಾಂಶ ಸಿಗುತ್ತಿರುವುದರಿಂದ ಕಂಬಳ ಪ್ರೇಮಿಗಳು ನೇರವಾಗಿ ಕರೆಯ ಬಳಿ ಬಂದು ಕಂಬಳದ ಸವಿ ಅನುಭವಿಸಲಿದ್ದಾರೆ ಎಂದರು.
ಮಹಿಳಾ ವಿಭಾಗ ಅದ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ , ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ ,ಕೋಶಾಧಿಕಾರಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಮಾಧ್ಯಮ ಸಂಚಾಲಕ ಸತೀಶ್ ಕುಮಾರ್ ಪುಂಡಿಕಾಯಿ ಮೊದಲಾದವರು ಉಪಸ್ಥಿತರಿದ್ದರು.
Mangalore March 25th Lava Kusha jodukere kambala to be held in Ullal under MLA U T Khader banner.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm