ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm