ಬ್ರೇಕಿಂಗ್ ನ್ಯೂಸ್
25-03-23 04:13 pm Mangalore Correspondent ಕರಾವಳಿ
ಸುಳ್ಯ, ಮಾ.25 : ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು. ಇಬ್ಬರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45) ಮತ್ತು ಅವರ ಪತ್ನಿ ಶಾಂತ (35) ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಮೃತಪಟ್ಟಿದ್ದಾನೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಬಳಿ ಘಟನೆ ನಡೆದಿದೆ.



ಖಾಸಗಿ ವ್ಯಕ್ತಿಯೊಬ್ಬರು ಮನೆಯ ಹಿಂಭಾಗದಲ್ಲಿ ಧರೆ ಕುಸಿಯದಂತೆ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದು ಪಿಲ್ಲರ್ ತೆಗೆಯಲು ಅಗೆದು ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗಲೇ ಮೇಲ್ಭಾಗದ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ನಾಲ್ವರು ಓಡಿ ಪಾರಾಗಿದ್ದರೆ, ಮೂವರು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಜೆಸಿಬಿ ಮೂಲಕ ಮಣ್ಣನ್ನು ಹೊರತೆಗೆದು ಒಳಗೆ ಸಿಲುಕಿದ್ದವರ ರಕ್ಷಣೆಗೆ ಯತ್ನಿಸಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸತತ ಒಂದುವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು ಒಳಗೆ ಸಿಲುಕಿದ್ದ ಮೂವರು ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದಾರೆ.
Mangalore Retaining wall collapses in Sullia, three workers killed on spot. After one hour of work by JCB the three workers who were stuck inside the mud were removed. Minster Angara visited the spot.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm