ಬ್ರೇಕಿಂಗ್ ನ್ಯೂಸ್
25-03-23 04:13 pm Mangalore Correspondent ಕರಾವಳಿ
ಸುಳ್ಯ, ಮಾ.25 : ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು. ಇಬ್ಬರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45) ಮತ್ತು ಅವರ ಪತ್ನಿ ಶಾಂತ (35) ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಮೃತಪಟ್ಟಿದ್ದಾನೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಬಳಿ ಘಟನೆ ನಡೆದಿದೆ.



ಖಾಸಗಿ ವ್ಯಕ್ತಿಯೊಬ್ಬರು ಮನೆಯ ಹಿಂಭಾಗದಲ್ಲಿ ಧರೆ ಕುಸಿಯದಂತೆ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದು ಪಿಲ್ಲರ್ ತೆಗೆಯಲು ಅಗೆದು ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗಲೇ ಮೇಲ್ಭಾಗದ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ನಾಲ್ವರು ಓಡಿ ಪಾರಾಗಿದ್ದರೆ, ಮೂವರು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಜೆಸಿಬಿ ಮೂಲಕ ಮಣ್ಣನ್ನು ಹೊರತೆಗೆದು ಒಳಗೆ ಸಿಲುಕಿದ್ದವರ ರಕ್ಷಣೆಗೆ ಯತ್ನಿಸಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸತತ ಒಂದುವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು ಒಳಗೆ ಸಿಲುಕಿದ್ದ ಮೂವರು ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದಾರೆ.
Mangalore Retaining wall collapses in Sullia, three workers killed on spot. After one hour of work by JCB the three workers who were stuck inside the mud were removed. Minster Angara visited the spot.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm