ಬ್ರೇಕಿಂಗ್ ನ್ಯೂಸ್
25-03-23 04:13 pm Mangalore Correspondent ಕರಾವಳಿ
ಸುಳ್ಯ, ಮಾ.25 : ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು. ಇಬ್ಬರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45) ಮತ್ತು ಅವರ ಪತ್ನಿ ಶಾಂತ (35) ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಮೃತಪಟ್ಟಿದ್ದಾನೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಬಳಿ ಘಟನೆ ನಡೆದಿದೆ.



ಖಾಸಗಿ ವ್ಯಕ್ತಿಯೊಬ್ಬರು ಮನೆಯ ಹಿಂಭಾಗದಲ್ಲಿ ಧರೆ ಕುಸಿಯದಂತೆ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದು ಪಿಲ್ಲರ್ ತೆಗೆಯಲು ಅಗೆದು ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗಲೇ ಮೇಲ್ಭಾಗದ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ನಾಲ್ವರು ಓಡಿ ಪಾರಾಗಿದ್ದರೆ, ಮೂವರು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಜೆಸಿಬಿ ಮೂಲಕ ಮಣ್ಣನ್ನು ಹೊರತೆಗೆದು ಒಳಗೆ ಸಿಲುಕಿದ್ದವರ ರಕ್ಷಣೆಗೆ ಯತ್ನಿಸಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸತತ ಒಂದುವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು ಒಳಗೆ ಸಿಲುಕಿದ್ದ ಮೂವರು ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದಾರೆ.
Mangalore Retaining wall collapses in Sullia, three workers killed on spot. After one hour of work by JCB the three workers who were stuck inside the mud were removed. Minster Angara visited the spot.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm