ಬ್ರೇಕಿಂಗ್ ನ್ಯೂಸ್
27-03-23 02:03 pm Mangalore Correspondent ಕರಾವಳಿ
ಮಂಗಳೂರು, ಮಾ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದ ಸುಳ್ಯದ ಪಿಎಫ್ಐ ಕಚೇರಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು ಸಂಪೂರ್ಣ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ತಂಡದ ಎಸ್ಪಿ ಶಣ್ಮುಗಂ ಈ ಬಗ್ಗೆ ಮಾರ್ಚ್ 25ರಂದು ಆದೇಶ ಮಾಡಿದ್ದಾರೆ.
ಸದ್ರಿ ಕಟ್ಟಡವನ್ನು ಯಾರಿಗೂ ಬಾಡಿಗೆ ಅಥವಾ ಲೀಸ್ ಕೊಡುವಂತಿಲ್ಲ. ಅಥವಾ ಇನ್ಯಾವುದೇ ಕೆಲಸಕ್ಕೆ ಬಳಸಿಕೊಳ್ಳುವಂತಿಲ್ಲ. ಅಲ್ಲಿರುವ ವಸ್ತುಗಳನ್ನಾಗಲೀ, ಇನ್ನಾವುದೇ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುವುದು, ನವೀಕರಣಗೊಳಿಸುವುದು ನಿಷಿದ್ಧ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆಯ ಮೂಲಕ ಸಮಾಜದಲ್ಲಿ ಭಯ ಮೂಡಿಸುವ ಉದ್ದೇಶ ಇದ್ದಿರುವುದು ತನಿಖೆಯಲ್ಲಿ ಕಂಡುಬಂದಿದ್ದು, ಹೀಗಾಗಿ ಇದೊಂದು ಭಯೋತ್ಪಾದಕ ಕೃತ್ಯ. ಈ ರೀತಿಯ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಲು ಪಿಎಫ್ಐ ಕಚೇರಿಯನ್ನು ಬಳಸಿಕೊಂಡಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
1967ರ ಯುಎಪಿಎ ಕಾಯ್ದೆಯ ಸೆಕ್ಷನ್ 25ರಡಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಇದರಡಿ ಸದ್ರಿ ಕೃತ್ಯಕ್ಕೆ ಬಳಸಲಾದ ಆಯುಧಗಳು, ಕಟ್ಟಡಗಳನ್ನು ದೇಶದ್ರೋಹ ಕಾಯ್ದೆಯಡಿ ಜಪ್ತಿ ಮಾಡಲಾಗುತ್ತಿದೆ. ತನಿಖೆಯ ಸಂದರ್ಭ ಸಿಕ್ಕಿರುವ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಸದ್ರಿ ಕಟ್ಟಡ, ಕಚೇರಿಯನ್ನು ಜಪ್ತಿ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಿದ್ದಾರೆ. ಇದಲ್ಲದೆ, ಪ್ರವೀಣ್ ನೆಟ್ಟಾರು ಕೊಲೆಯನ್ನು ಸಮಾಜದಲ್ಲಿ ಭೀತಿ ಮೂಡಿಸುವುದು, ಶಾಂತಿ- ಸೌಹಾರ್ದ ಕದಡುವುದು, ದೇಶದಲ್ಲಿ ಸಮಗ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿತ್ತು ಎಂದು ಎನ್ಐಎ ಹೇಳಿದೆ.
The National Investigation Agency (NIA) on Saturday seized the office of now banned Popular Front of India (PFI) in Dakshina Kannada district of Karnataka, officials privy to the matter said on Sunday. The PFI office is located on the first floor of a business complex on Alleti Road at Gandhinagara in Sullia of the district. The confiscation proceedings were conducted on Saturday in accordance with Section 25 of the Unlawful Activities Prevention Act, (UAPA) 1967.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm