ಬ್ರೇಕಿಂಗ್ ನ್ಯೂಸ್
27-03-23 02:03 pm Mangalore Correspondent ಕರಾವಳಿ
ಮಂಗಳೂರು, ಮಾ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದ ಸುಳ್ಯದ ಪಿಎಫ್ಐ ಕಚೇರಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು ಸಂಪೂರ್ಣ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ತಂಡದ ಎಸ್ಪಿ ಶಣ್ಮುಗಂ ಈ ಬಗ್ಗೆ ಮಾರ್ಚ್ 25ರಂದು ಆದೇಶ ಮಾಡಿದ್ದಾರೆ.
ಸದ್ರಿ ಕಟ್ಟಡವನ್ನು ಯಾರಿಗೂ ಬಾಡಿಗೆ ಅಥವಾ ಲೀಸ್ ಕೊಡುವಂತಿಲ್ಲ. ಅಥವಾ ಇನ್ಯಾವುದೇ ಕೆಲಸಕ್ಕೆ ಬಳಸಿಕೊಳ್ಳುವಂತಿಲ್ಲ. ಅಲ್ಲಿರುವ ವಸ್ತುಗಳನ್ನಾಗಲೀ, ಇನ್ನಾವುದೇ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುವುದು, ನವೀಕರಣಗೊಳಿಸುವುದು ನಿಷಿದ್ಧ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆಯ ಮೂಲಕ ಸಮಾಜದಲ್ಲಿ ಭಯ ಮೂಡಿಸುವ ಉದ್ದೇಶ ಇದ್ದಿರುವುದು ತನಿಖೆಯಲ್ಲಿ ಕಂಡುಬಂದಿದ್ದು, ಹೀಗಾಗಿ ಇದೊಂದು ಭಯೋತ್ಪಾದಕ ಕೃತ್ಯ. ಈ ರೀತಿಯ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಲು ಪಿಎಫ್ಐ ಕಚೇರಿಯನ್ನು ಬಳಸಿಕೊಂಡಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
1967ರ ಯುಎಪಿಎ ಕಾಯ್ದೆಯ ಸೆಕ್ಷನ್ 25ರಡಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಇದರಡಿ ಸದ್ರಿ ಕೃತ್ಯಕ್ಕೆ ಬಳಸಲಾದ ಆಯುಧಗಳು, ಕಟ್ಟಡಗಳನ್ನು ದೇಶದ್ರೋಹ ಕಾಯ್ದೆಯಡಿ ಜಪ್ತಿ ಮಾಡಲಾಗುತ್ತಿದೆ. ತನಿಖೆಯ ಸಂದರ್ಭ ಸಿಕ್ಕಿರುವ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಸದ್ರಿ ಕಟ್ಟಡ, ಕಚೇರಿಯನ್ನು ಜಪ್ತಿ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಿದ್ದಾರೆ. ಇದಲ್ಲದೆ, ಪ್ರವೀಣ್ ನೆಟ್ಟಾರು ಕೊಲೆಯನ್ನು ಸಮಾಜದಲ್ಲಿ ಭೀತಿ ಮೂಡಿಸುವುದು, ಶಾಂತಿ- ಸೌಹಾರ್ದ ಕದಡುವುದು, ದೇಶದಲ್ಲಿ ಸಮಗ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿತ್ತು ಎಂದು ಎನ್ಐಎ ಹೇಳಿದೆ.
The National Investigation Agency (NIA) on Saturday seized the office of now banned Popular Front of India (PFI) in Dakshina Kannada district of Karnataka, officials privy to the matter said on Sunday. The PFI office is located on the first floor of a business complex on Alleti Road at Gandhinagara in Sullia of the district. The confiscation proceedings were conducted on Saturday in accordance with Section 25 of the Unlawful Activities Prevention Act, (UAPA) 1967.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm