ಬ್ರೇಕಿಂಗ್ ನ್ಯೂಸ್
29-03-23 06:44 pm Mangalore Correspondent ಕರಾವಳಿ
Photo credits : Representational Image
ಮಂಗಳೂರು, ಮಾ.29: ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4.33 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರು ಕಾರ್ ಸ್ಟ್ರೀಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಸಿಎಂ ಹಾಜೀಂ ಎಂಬವರ ಕಾರಿನಲ್ಲಿ 3.23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಹಣಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಜೀಂ ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿಯಾಗಿದ್ದು, ಹಣದ ಬಗ್ಗೆ ಕೇಳಿದಾಗ ಅದು ತನ್ನ ಮಾವ ಕೊಟ್ಟಿರುವುದು, ಮಾವ ಕಾರ್ ಸ್ಟ್ರೀಟ್ ನಲ್ಲಿ ಜುವೆಲ್ಲರಿ ಹೊಂದಿದ್ದು ಹಣವನ್ನು ಅವರ ಪತ್ನಿಗೆ ಮುಟ್ಟಿಸಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಆದರೆ ಪೊಲೀಸರು ಅದನ್ನು ಕೇಳದೆ ಹಣವನ್ನು ವಶಕ್ಕೆ ಪಡೆದು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕದ್ರಿ ಪೊಲೀಸರು ನಂತೂರಿನಲ್ಲಿ ಕಾರು ತಪಾಸಣೆ ನಡೆಸುತ್ತಿದ್ದಾಗ 1.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಕಾಸರಗೋಡು ಮೂಲದ ಅನಿಲ್(35) ಮತ್ತು ಶಮೀಲ್ (39) ಎಂಬವರು ಕಾರಿನಲ್ಲಿದ್ದು ನಂತೂರಿನಿಂದ ಮಲ್ಲಿಕಟ್ಟೆಯತ್ತ ತೆರಳುತ್ತಿದ್ದರು. ಹಣದ ಕಂತೆ ಇದ್ದುದರ ಬಗ್ಗೆ ಸೂಕ್ತ ದಾಖಲೆ ಹೊಂದಿಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದಿನ ಸೀಟಿನಲ್ಲಿರಿಸಿದ್ದ ಕಪ್ಪು ಸ್ಕೂಲ್ ಬ್ಯಾಗಿನಲ್ಲಿ ನಗದು ಹಣ ಪತ್ತೆಯಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ahead of the upcoming Assembly elections, city police have confiscated Rs 4.33 lac in cash that was being transported without valid documents in two separate incidents.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm