ಬ್ರೇಕಿಂಗ್ ನ್ಯೂಸ್
30-03-23 01:02 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಹೆಜ್ಜೇನು ದಾಳಿಗೆ ತುತ್ತಾಗಿ ಮೂವರು ಗಾಯಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ನಗರದ ಫಾ. ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ ಘಟನೆ ನರಿಂಗಾನ ಗ್ರಾಮದ ಬೋಳದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79), ಅವರ ಪುತ್ರ ರಾಯಲ್ ಕುಟಿನ್ಹ(39) ಹೆಜ್ಜೇನು ದಾಳಿಗೆ ತುತ್ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಸಂದರ್ಭ ಅಣ್ಣನ ಕೂಗು ಕೇಳಿ ಧಾವಿಸಿದ ರಾಬರ್ಟ್ ಕುಟಿನ್ಹ ಅವರ ಸಹೋದರ ಜೋಸೆಫ್ ಕುಟಿನ್ಹ ಅವರಿಗೂ ಗಾಯಗಳಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಜೋಸೆಫ್ ಕುಟಿನ್ಹ ಅವರ ಪುತ್ರ ಅಖಿಲ್ ಅವರಿಗೂ ಹೆಜ್ಜೇನು ಕಡಿದಿದೆ.
ರಾಬರ್ಟ್ ಕುಟಿನ್ಹ ಅವರು ಬೆಳಗ್ಗೆ ಒಣಗಿದ ಬಟ್ಟೆ ತೆಗೆಯಲೆಂದು ಮನೆಯ ಮಹಡಿ ಹತ್ತುತ್ತಿದ್ದಾಗ ಇದ್ದಕ್ಕಿದ್ದಂತೆ ಹೆಜ್ಜೇನು ದಾಳಿ ಮಾಡಿದ್ದು ನೋವು ತಡೆಯಲಾರದೆ ಕೂಗಿಕೊಂಡಾಗ ರಕ್ಷಣೆಗೆಂದು ಧಾವಿಸಿದ ಪುತ್ರ ರಾಯಲ್ ಮೇಲೂ ದಾಳಿ ಮಾಡಿದೆ. ಮಗನ ಸಹಾಯದಿಂದ ಮಹಡಿಯಿಂದ ಪವಾಡ ಸದೃಶ ಇಳಿದು ಪಾರಾದರೂ ಅವರಿಬ್ಬರ ಕೂಗು ಕೇಳಿದ ಜೋಸೆಫ್ ಕುಟಿನ್ಹ ಹಾಗೂ ಅಖಿಲ್ ರಕ್ಷಣೆಗೆ ಧಾವಿಸಿದಾಗ ಅವರಿಗೂ ನೊಣಗಳು ಕಡಿದಿವೆ. ರಾಬರ್ಟ್ ಕುಟಿನ್ಹ ಅವರಿಗೆ ಸುಮಾರು ನೂರೈವತ್ತು ಕಡೆ ಗಾಯಗಳಾಗಿದ್ದು ಮಹಡಿಯಿಂದ ಇಳಿದರೂ ಹೆಜ್ಜೇನು ಬೆಂಬಿಡದಾಗ ಬೇರೆ ದಾರಿ ಕಾಣದೆ ಕಟ್ಟ ಕಡೆಗೆ ಸಮೀಪದ ಬಾವಿಗೆ ಇಳಿದು ನೀರಿನಲ್ಲಿ ಮುಳುಗಿ ಸುಮಾರು ಹೊತ್ತಿನ ಬಳಿಕ ಮೇಲೆದ್ದು ಬಂದು ಜೀವ ಉಳಿಸಿಕೊಂಡಿದ್ದಾರೆ. ಪುತ್ರ ರಾಯಲ್ ಗೂ ಸುಮಾರು ಇಪ್ಪತ್ತೆರಡು ಕಡೆ ಗಾಯಗಳಾಗಿದ್ದು ಮುಖ ನೋವಿನಿಂದ ಊದಿಕೊಂಡಿದೆ. ಮನೆಯ ಸಿಟ್ ಔಟ್ ನಲ್ಲಿ ರಾಯಲ್ ಪತ್ನಿ ಹಾಗೂ ಮಗು ಕುಳಿತುಕೊಂಡಿದ್ದರೂ ಮನೆ ಮಂದಿ ಎಚ್ಚರಿಸಿದ ಕಾರಣ ಮನೆಯ ಕೊಠಡಿಯೊಳಗೆ ರಕ್ಷಣೆ ಪಡೆದಿದ್ದು ಕಿಟಕಿಗಳಿಗೆ ನೆಟ್ ಹಾಕಿದ್ದರಿಂದ ಅವರುಗಳು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
Mangalore Two hospitalised after honeybee attack in Naringana Ullal. 79 year old grandfather was said to be hiding inside the well to escape the attack.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm