ಬ್ರೇಕಿಂಗ್ ನ್ಯೂಸ್
30-03-23 02:02 pm Mangalore Correspondent ಕರಾವಳಿ
ಮಂಗಳೂರು, ಮಾ.30 : ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದ ಚಾಲನೆಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ನಾಲ್ಕು ದಿನಗಳ ಹಿಂದಷ್ಟೇ ಹನ್ನೊಂದು ವರ್ಷದ ಮಗುವನ್ನು ಬಲಿ ಪಡೆದಿದ್ದ ಬೆಂದೂರುವೆಲ್ ಸರ್ಕಲ್ ನಲ್ಲಿಯೇ ಮಹಿಳೆಯೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಸರಿಪಲ್ಲದಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ವರೆಗೆ ತೆರಳುವ 4ಬಿ ಆಸ್ಲೆನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಬೆಂದೂರುವೆಲ್ ವೃತ್ತದಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದಕ್ಕೆ ಹೋಗುವ ಯತ್ನದಲ್ಲಿ ಅದೇ ಬಸ್ಸಿನಿಂದ ಇಳಿದು ಹೋಗಿದ್ದ ಮಹಿಳೆಯ ಮೇಲೆ ಹರಿದು ಹೋಗಿದೆ.

ಐರಿನ್ ಡಿಸೋಜ(65) ಎಂಬ ಮಹಿಳೆ ಬಸ್ಸಿನಿಂದ ಇಳಿದು ರಸ್ತೆ ದಾಟಲೆಂದು ಬಸ್ಸಿನ ಮುಂಭಾಗದಿಂದ ತೆರಳುತ್ತಿದ್ದಾಗ ಬಸ್ ಚಾಲಕ ನೇರವಾಗಿ ಬಸ್ ಚಲಾಯಿಸಿದ್ದಾನೆ. ಮಹಿಳೆಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಚಾಲಕನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂದೂರುವೆಲ್ ವೃತ್ತದಲ್ಲಿ ನಾಲ್ಕು ದಿನಗಳ ಹಿಂದೆ ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗನ ಮೇಲೆ ಬಸ್ ಡಿಕ್ಕಿಯಾಗಿತ್ತು. ಹನ್ನೊಂದು ವರ್ಷದ ಮಗು ಸ್ಥಳದಲ್ಲೇ ದುರಂತ ಸಾವನ್ನಪ್ಪಿದ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ದುರ್ಘಟನೆ ನಡೆದಿದೆ.
Mangalore Bendoorwell accident, 65 year old woman killed on spot while crossing road. The deceased has been identified as Irine Dsouza. Recently 11 year old boy was killed in bus accident.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am