ಬ್ರೇಕಿಂಗ್ ನ್ಯೂಸ್
30-03-23 09:35 pm Mangalore Correspondent ಕರಾವಳಿ
ಮಂಗಳೂರು, ಮಾ.30: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಾದ್ಯಂತ ಸರಕಾರಿ ಕಚೇರಿಗಳಲ್ಲಿ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಬಳಸುವಂತಿಲ್ಲ. ನೀತಿಸಂಹಿತೆ ಪ್ರಕಾರ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಸುದ್ದಿಗೋಷ್ಟಿ ಕರೆದು ಮಾಧ್ಯಮಕ್ಕೂ ಮಾಹಿತಿ ನೀಡಿದರಾದರೂ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಹಾಕಿದ್ದ ರಾಜಕೀಯ ವ್ಯಕ್ತಿಗಳ ಫೋಟೊಗಳನ್ನೇ ತೆರವುಗೊಳಿಸಿಲ್ಲ.
ಸುದ್ದಿಗೋಷ್ಟಿಗೆ ತೆರಳಿದ್ದ ಮಾಧ್ಯಮದ ಮಂದಿ ಅಲ್ಲಿನ ಗೋಡೆಗಳಲ್ಲಿ ಅಂಟಿಸಿದ್ದ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಗಮನಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಇನ್ನಿತರ ವ್ಯಕ್ತಿಗಳ ಫೋಟೊಗಳನ್ನು ಗೋಡೆಗೆ ಹಾಕಿರುವುದನ್ನೂ ತೆಗೆದಿರಲಿಲ್ಲ. ಜಿಲ್ಲಾಧಿಕಾರಿ ಸುದ್ದಿಗೋಷ್ಟಿಯಲ್ಲಿ ರಾಜಕೀಯ ವ್ಯಕ್ತಿಗಳ ಬ್ಯಾನರ್, ಫೋಟೋಗಳನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಲಾಗುವುದು, ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚುನಾವಣಾ ವೀಕ್ಷಕರು ಪ್ರತಿ ತಾಲೂಕಿನಲ್ಲಿ ಈ ಬಗ್ಗೆ ನಿಗಾ ವಹಿಸುತ್ತಾರೆ ಎಂದು ಹೇಳಿದರು. ಆದರೆ ತಮ್ಮ ಕಚೇರಿಯಲ್ಲೇ ರಾಜಕೀಯ ವ್ಯಕ್ತಿಗಳ ಫೋಟೊ ತೆರವುಗೊಳಿಸದೆ ಜಿಲ್ಲಾಧಿಕಾರಿ ಎಟವಟ್ಟು ಮಾಡಿಕೊಂಡಿದ್ದರು.
ಕೋಲ, ನೇಮ, ಯಕ್ಷಗಾನಕ್ಕೆ ಅಡ್ಡಿಯಿಲ್ಲ
ನೀತಿಸಂಹಿತೆ ಇದ್ದರೂ, ಯಾವುದೇ ಧಾರ್ಮಿಕ ಆಚರಣೆಗಳಿಗೆ ತೊಂದರೆ ಇಲ್ಲ. ಅಲ್ಲದೆ, ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಪ್ರದರ್ಶನಕ್ಕೂ ತೊಂದರೆ ಇಲ್ಲ. ಕೋಲ, ನೇಮದಂತಹ ದೈವಾರಾಧನೆಗೂ ಅಡ್ಡಿ ಇರುವುದಿಲ್ಲ. ಯಾವುದೇ ಧರ್ಮದ ಧಾರ್ಮಿಕ ಆಚರಣೆಗಳಿಗೆ ನೀತಿಸಂಹಿತೆಯಿಂದ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಯಾವುದೇ ಕಾರ್ಯಕ್ರಮದ ಬಗ್ಗೆ ಬ್ಯಾನರ್, ಬಂಟಿಂಗ್ಸ್ ಹಾಕುವುದಿದ್ದರೆ ಸ್ಥಳೀಯ ಚುನಾವಣಾಧಿಕಾರಿ ಪರವಾನಗಿ ಪಡೆಯಬೇಕು. ಅನುಮತಿ ಪಡೆಯದೆ ಬಂಟಿಂಗ್ಸ್ ಹಾಕುವಂತಿಲ್ಲ. ರಾಜಕೀಯ ಕಾರ್ಯಕ್ರಮದ ಬಗ್ಗೆಯೂ ಪೂರ್ವಾನುಮತಿ ಪಡೆದು ಬಂಟಿಂಗ್ಸ್ ಹಾಕಬಹುದು ಎಂದರು.
Mangalore Dc office breaks conduct of conduct during elections, BJP leaders photo frame remains at office.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm