ಬ್ರೇಕಿಂಗ್ ನ್ಯೂಸ್
04-04-23 01:21 pm Mangalore Correspondent ಕರಾವಳಿ
ಮಂಗಳೂರು, ಎ.4 : ಮಾನವೀಯ ಕಾರ್ಯಕ್ಕೆ ಮನಸ್ಸು ಮುಖ್ಯ ಅಂತಾರೆ. ಇಲ್ಲೊಬ್ಬರು ವೃದ್ಧ ಮಹಿಳೆ ತನ್ನ ಮನೆ ಬಳಿಯ ರೈಲು ಹಳಿಯಲ್ಲಿ ಬೃಹತ್ ಮರ ಬಿದ್ದಿರುವುದನ್ನು ಕಂಡು ತಾನೇ ತರಾತುರಿಯಲ್ಲಿ ಕೆಂಪು ವಸ್ತ್ರ ತೋರಿಸಿ ರೈಲು ನಿಲ್ಲಿಸಿ ಸಂಭಾವ್ಯ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿಯ ನಿವಾಸಿ, 70 ವರ್ಷದ ಚಂದ್ರಾವತಿ ಸಮಯ ಪ್ರಜ್ಞೆ ಮೆರೆದ ಮಹಿಳೆ. ಮನೆ ಬಳಿಯ ತೋಟಕ್ಕೆ ತೆರಳಿದ್ದ ಮಹಿಳೆ ರೈಲು ಹಳಿಗೆ ಮರ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ತೆರಳಿ ಅಕ್ಕಪಕ್ಕದವರನ್ನು ಫೋನ್ ಮಾಡಿ ಕರೆಯೋಣ ಎಂದು ದಾಪುಗಾಲು ಹಾಕುತ್ತಿದ್ದಾಗಲೇ ಮಹಿಳೆಗೆ ರೈಲಿನ ಹಾರನ್ ಕೇಳಿಸಿತ್ತು.
ಕೂಡಲೇ ಮನೆಗೆ ತೆರಳಿದ ಮಹಿಳೆ, ಕೆಂಪು ಬಟ್ಟೆಯನ್ನು ಹಿಡಿದು ರೈಲು ಹಳಿಯತ್ತ ಓಡಿದ್ದಾರೆ. ರೈಲು ಬರುತ್ತಿದ್ದ ಜಾಗದಿಂದ ಇನ್ನೊಂದು ಬದಿಯ ಹಳಿಯಲ್ಲಿ ನಿಂತು ಕೆಂಪು ಬಟ್ಟೆ ತೋರಿಸಿ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನು ಗಮನಿಸಿದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿದ್ದು ಹತ್ತಿರ ಬಂದಂತೆ ಮುಂದೆ ಹಳಿಗೆ ಅಡ್ಡಲಾಗಿ ಮರ ಬಿದ್ದಿರುವುದು ಕಂಡುಬಂದಿದೆ. ಆನಂತರ, ರೈಲು ನಿಲ್ಲಿಸಿ ರೈಲ್ವೇ ಸಿಬಂದಿ ಮತ್ತು ಸ್ಥಳೀಯರು ಸೇರಿ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ರೈಲು ಹಳಿಗೆ ಮರ ಬಿದ್ದಿದ್ದನ್ನ ಕಂಡು ಸಂಭಾವ್ಯ ಅನಾಹುತ ತಪ್ಪಿಸಿದ ವೃದ್ಧ ಮಹಿಳೆಯನ್ನು ಸ್ಥಳೀಯರು ಮತ್ತು ರೈಲು ಸಿಬಂದಿ ಪ್ರಶಂಸೆ ಮಾಡಿದ್ದಾರೆ. ಮಂಗಳೂರು- ಮುಂಬೈ ಸಂಚರಿಸುವ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅದಾಗಿದ್ದು ವೇಗವಾಗಿ ಮರದ ಮೇಲಿನಿಂದ ತೆರಳುತ್ತಿದ್ದರೆ ಹಳಿ ತಪ್ಪುವ ಅಪಾಯ ಇತ್ತು.
Mangalore 70 year old woman averts major train accident at Pachanady betweens Padil Jokatte. Chandravati, who lives in Mandara near Pachanady, noticed a tree had fallen on the train track just as the Matsyagandha train was making its way from Mangaluru to Mumbai.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm