ಬ್ರೇಕಿಂಗ್ ನ್ಯೂಸ್
04-04-23 01:21 pm Mangalore Correspondent ಕರಾವಳಿ
ಮಂಗಳೂರು, ಎ.4 : ಮಾನವೀಯ ಕಾರ್ಯಕ್ಕೆ ಮನಸ್ಸು ಮುಖ್ಯ ಅಂತಾರೆ. ಇಲ್ಲೊಬ್ಬರು ವೃದ್ಧ ಮಹಿಳೆ ತನ್ನ ಮನೆ ಬಳಿಯ ರೈಲು ಹಳಿಯಲ್ಲಿ ಬೃಹತ್ ಮರ ಬಿದ್ದಿರುವುದನ್ನು ಕಂಡು ತಾನೇ ತರಾತುರಿಯಲ್ಲಿ ಕೆಂಪು ವಸ್ತ್ರ ತೋರಿಸಿ ರೈಲು ನಿಲ್ಲಿಸಿ ಸಂಭಾವ್ಯ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿಯ ನಿವಾಸಿ, 70 ವರ್ಷದ ಚಂದ್ರಾವತಿ ಸಮಯ ಪ್ರಜ್ಞೆ ಮೆರೆದ ಮಹಿಳೆ. ಮನೆ ಬಳಿಯ ತೋಟಕ್ಕೆ ತೆರಳಿದ್ದ ಮಹಿಳೆ ರೈಲು ಹಳಿಗೆ ಮರ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ತೆರಳಿ ಅಕ್ಕಪಕ್ಕದವರನ್ನು ಫೋನ್ ಮಾಡಿ ಕರೆಯೋಣ ಎಂದು ದಾಪುಗಾಲು ಹಾಕುತ್ತಿದ್ದಾಗಲೇ ಮಹಿಳೆಗೆ ರೈಲಿನ ಹಾರನ್ ಕೇಳಿಸಿತ್ತು.
ಕೂಡಲೇ ಮನೆಗೆ ತೆರಳಿದ ಮಹಿಳೆ, ಕೆಂಪು ಬಟ್ಟೆಯನ್ನು ಹಿಡಿದು ರೈಲು ಹಳಿಯತ್ತ ಓಡಿದ್ದಾರೆ. ರೈಲು ಬರುತ್ತಿದ್ದ ಜಾಗದಿಂದ ಇನ್ನೊಂದು ಬದಿಯ ಹಳಿಯಲ್ಲಿ ನಿಂತು ಕೆಂಪು ಬಟ್ಟೆ ತೋರಿಸಿ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನು ಗಮನಿಸಿದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿದ್ದು ಹತ್ತಿರ ಬಂದಂತೆ ಮುಂದೆ ಹಳಿಗೆ ಅಡ್ಡಲಾಗಿ ಮರ ಬಿದ್ದಿರುವುದು ಕಂಡುಬಂದಿದೆ. ಆನಂತರ, ರೈಲು ನಿಲ್ಲಿಸಿ ರೈಲ್ವೇ ಸಿಬಂದಿ ಮತ್ತು ಸ್ಥಳೀಯರು ಸೇರಿ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ರೈಲು ಹಳಿಗೆ ಮರ ಬಿದ್ದಿದ್ದನ್ನ ಕಂಡು ಸಂಭಾವ್ಯ ಅನಾಹುತ ತಪ್ಪಿಸಿದ ವೃದ್ಧ ಮಹಿಳೆಯನ್ನು ಸ್ಥಳೀಯರು ಮತ್ತು ರೈಲು ಸಿಬಂದಿ ಪ್ರಶಂಸೆ ಮಾಡಿದ್ದಾರೆ. ಮಂಗಳೂರು- ಮುಂಬೈ ಸಂಚರಿಸುವ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅದಾಗಿದ್ದು ವೇಗವಾಗಿ ಮರದ ಮೇಲಿನಿಂದ ತೆರಳುತ್ತಿದ್ದರೆ ಹಳಿ ತಪ್ಪುವ ಅಪಾಯ ಇತ್ತು.
Mangalore 70 year old woman averts major train accident at Pachanady betweens Padil Jokatte. Chandravati, who lives in Mandara near Pachanady, noticed a tree had fallen on the train track just as the Matsyagandha train was making its way from Mangaluru to Mumbai.
26-08-25 04:48 pm
Bangalore Correspondent
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm