ಬ್ರೇಕಿಂಗ್ ನ್ಯೂಸ್
04-04-23 01:21 pm Mangalore Correspondent ಕರಾವಳಿ
ಮಂಗಳೂರು, ಎ.4 : ಮಾನವೀಯ ಕಾರ್ಯಕ್ಕೆ ಮನಸ್ಸು ಮುಖ್ಯ ಅಂತಾರೆ. ಇಲ್ಲೊಬ್ಬರು ವೃದ್ಧ ಮಹಿಳೆ ತನ್ನ ಮನೆ ಬಳಿಯ ರೈಲು ಹಳಿಯಲ್ಲಿ ಬೃಹತ್ ಮರ ಬಿದ್ದಿರುವುದನ್ನು ಕಂಡು ತಾನೇ ತರಾತುರಿಯಲ್ಲಿ ಕೆಂಪು ವಸ್ತ್ರ ತೋರಿಸಿ ರೈಲು ನಿಲ್ಲಿಸಿ ಸಂಭಾವ್ಯ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿಯ ನಿವಾಸಿ, 70 ವರ್ಷದ ಚಂದ್ರಾವತಿ ಸಮಯ ಪ್ರಜ್ಞೆ ಮೆರೆದ ಮಹಿಳೆ. ಮನೆ ಬಳಿಯ ತೋಟಕ್ಕೆ ತೆರಳಿದ್ದ ಮಹಿಳೆ ರೈಲು ಹಳಿಗೆ ಮರ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ತೆರಳಿ ಅಕ್ಕಪಕ್ಕದವರನ್ನು ಫೋನ್ ಮಾಡಿ ಕರೆಯೋಣ ಎಂದು ದಾಪುಗಾಲು ಹಾಕುತ್ತಿದ್ದಾಗಲೇ ಮಹಿಳೆಗೆ ರೈಲಿನ ಹಾರನ್ ಕೇಳಿಸಿತ್ತು.
ಕೂಡಲೇ ಮನೆಗೆ ತೆರಳಿದ ಮಹಿಳೆ, ಕೆಂಪು ಬಟ್ಟೆಯನ್ನು ಹಿಡಿದು ರೈಲು ಹಳಿಯತ್ತ ಓಡಿದ್ದಾರೆ. ರೈಲು ಬರುತ್ತಿದ್ದ ಜಾಗದಿಂದ ಇನ್ನೊಂದು ಬದಿಯ ಹಳಿಯಲ್ಲಿ ನಿಂತು ಕೆಂಪು ಬಟ್ಟೆ ತೋರಿಸಿ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನು ಗಮನಿಸಿದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿದ್ದು ಹತ್ತಿರ ಬಂದಂತೆ ಮುಂದೆ ಹಳಿಗೆ ಅಡ್ಡಲಾಗಿ ಮರ ಬಿದ್ದಿರುವುದು ಕಂಡುಬಂದಿದೆ. ಆನಂತರ, ರೈಲು ನಿಲ್ಲಿಸಿ ರೈಲ್ವೇ ಸಿಬಂದಿ ಮತ್ತು ಸ್ಥಳೀಯರು ಸೇರಿ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ರೈಲು ಹಳಿಗೆ ಮರ ಬಿದ್ದಿದ್ದನ್ನ ಕಂಡು ಸಂಭಾವ್ಯ ಅನಾಹುತ ತಪ್ಪಿಸಿದ ವೃದ್ಧ ಮಹಿಳೆಯನ್ನು ಸ್ಥಳೀಯರು ಮತ್ತು ರೈಲು ಸಿಬಂದಿ ಪ್ರಶಂಸೆ ಮಾಡಿದ್ದಾರೆ. ಮಂಗಳೂರು- ಮುಂಬೈ ಸಂಚರಿಸುವ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅದಾಗಿದ್ದು ವೇಗವಾಗಿ ಮರದ ಮೇಲಿನಿಂದ ತೆರಳುತ್ತಿದ್ದರೆ ಹಳಿ ತಪ್ಪುವ ಅಪಾಯ ಇತ್ತು.
Mangalore 70 year old woman averts major train accident at Pachanady betweens Padil Jokatte. Chandravati, who lives in Mandara near Pachanady, noticed a tree had fallen on the train track just as the Matsyagandha train was making its way from Mangaluru to Mumbai.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm