ಬ್ರೇಕಿಂಗ್ ನ್ಯೂಸ್
06-04-23 02:14 pm Mangaluru Correspondent ಕರಾವಳಿ
ಮಂಗಳೂರು, ಎ.6: ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿರುವ ಖಾಸಗಿ ಕ್ಷಣಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣೆ ಕಾಲದಲ್ಲಿ ಬಿಜೆಪಿಗೆ ಮುಜುಗರ ಸೃಷ್ಟಿಸಿದೆ.
ಎ.5ರಂದು ಫೋಟೋ ವೈರಲ್ ಆಗುತ್ತಿದ್ದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ತನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲವೆಂದು ಚರ್ಚೆ ಒಂದೆಡೆ ಇದ್ದರೆ, ಇದರ ನಡುವಲ್ಲೇ ಗೌಡ ಸಮುದಾಯದ ಮುಖಂಡರು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಠಂದೂರು ಅವರಿಗೆ ಮತ್ತೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಇದರ ಬೆನ್ನಲ್ಲೇ ಫೋಟೋ ಮತ್ತು ವಿಡಿಯೋ ಹರಿಯಬಿಡಲಾಗಿದೆ. ಈ ವಿಡಿಯೋ ಯಾವಾಗಿನದ್ದು, ಎಲ್ಲಿಂದ ಸೃಷ್ಟಿಯಾಗಿದೆ ಎನ್ನುವುದು ಗೊತ್ತಿಲ್ಲ. ಶಾಸಕರ ಫೋಟೊ ಜಾಲತಾಣದಲ್ಲಿ ಫಾರ್ವರ್ಡ್ ಮಾಡುತ್ತಿರುವ ಬಗ್ಗೆ ಪೊಲೀಸರು ಐಟಿ ಏಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
ಚುನಾವಣೆ ಸಮಯದಲ್ಲಿಯೇ ಬಿಜೆಪಿ ಶಾಸಕನ ಅಶ್ಲೀಲ ಫೋಟೊ ಬಿಡುಗಡೆ ಆಗಿರುವುದು ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಪಾಲಿಗೆ ಅಸ್ತ್ರ ನೀಡಿದಂತಾಗಿದೆ. ವರ್ಷದ ಹಿಂದೆಯೇ ಪುತ್ತೂರಿನಲ್ಲಿ ಶಾಸಕರ ವಿಡಿಯೋ ಇದೆಯೆಂದು ವದಂತಿ ಹಬ್ಬಿತ್ತು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಇದೀಗ ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎನ್ನುವುದು ಕಂಡುಬರುತ್ತದೆ.
A purported photograph of a Puttur BJP MLA Sanjeeva Matandoor with an unknown woman has gone viral on social media. The woman in the photograph has filed a police complaint at the Uppinangady Police Station alleging that the viral picture was doctored.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm