ಬ್ರೇಕಿಂಗ್ ನ್ಯೂಸ್
06-04-23 02:14 pm Mangaluru Correspondent ಕರಾವಳಿ
ಮಂಗಳೂರು, ಎ.6: ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿರುವ ಖಾಸಗಿ ಕ್ಷಣಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣೆ ಕಾಲದಲ್ಲಿ ಬಿಜೆಪಿಗೆ ಮುಜುಗರ ಸೃಷ್ಟಿಸಿದೆ.
ಎ.5ರಂದು ಫೋಟೋ ವೈರಲ್ ಆಗುತ್ತಿದ್ದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ತನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲವೆಂದು ಚರ್ಚೆ ಒಂದೆಡೆ ಇದ್ದರೆ, ಇದರ ನಡುವಲ್ಲೇ ಗೌಡ ಸಮುದಾಯದ ಮುಖಂಡರು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಠಂದೂರು ಅವರಿಗೆ ಮತ್ತೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಇದರ ಬೆನ್ನಲ್ಲೇ ಫೋಟೋ ಮತ್ತು ವಿಡಿಯೋ ಹರಿಯಬಿಡಲಾಗಿದೆ. ಈ ವಿಡಿಯೋ ಯಾವಾಗಿನದ್ದು, ಎಲ್ಲಿಂದ ಸೃಷ್ಟಿಯಾಗಿದೆ ಎನ್ನುವುದು ಗೊತ್ತಿಲ್ಲ. ಶಾಸಕರ ಫೋಟೊ ಜಾಲತಾಣದಲ್ಲಿ ಫಾರ್ವರ್ಡ್ ಮಾಡುತ್ತಿರುವ ಬಗ್ಗೆ ಪೊಲೀಸರು ಐಟಿ ಏಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
ಚುನಾವಣೆ ಸಮಯದಲ್ಲಿಯೇ ಬಿಜೆಪಿ ಶಾಸಕನ ಅಶ್ಲೀಲ ಫೋಟೊ ಬಿಡುಗಡೆ ಆಗಿರುವುದು ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಪಾಲಿಗೆ ಅಸ್ತ್ರ ನೀಡಿದಂತಾಗಿದೆ. ವರ್ಷದ ಹಿಂದೆಯೇ ಪುತ್ತೂರಿನಲ್ಲಿ ಶಾಸಕರ ವಿಡಿಯೋ ಇದೆಯೆಂದು ವದಂತಿ ಹಬ್ಬಿತ್ತು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಇದೀಗ ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎನ್ನುವುದು ಕಂಡುಬರುತ್ತದೆ.
A purported photograph of a Puttur BJP MLA Sanjeeva Matandoor with an unknown woman has gone viral on social media. The woman in the photograph has filed a police complaint at the Uppinangady Police Station alleging that the viral picture was doctored.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm