ಬ್ರೇಕಿಂಗ್ ನ್ಯೂಸ್
08-04-23 07:52 pm Mangaluru correspondent ಕರಾವಳಿ
ಮಂಗಳೂರು, ಎ.8: ಮುಸ್ಲಿಂ ಸಮುದಾಯದ ಬಪ್ಪ ಬ್ಯಾರಿ ನಿರ್ಮಿಸಿದ ದೇವಸ್ಥಾನ ಎಂಬ ಐತಿಹ್ಯ ಹೊಂದಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದುಯೇತರರ ವ್ಯಾಪಾರಕ್ಕೆ ನಿರ್ಬಂಧ ಹೇರಿ, ಬ್ಯಾನರ್ ಹಾಕಲಾಗಿದೆ. ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ದೇಗುಲ ಪರಿಸರದಲ್ಲಿ ನಿಷೇಧ ವಿಧಿಸಲಾಗಿದ್ದು ಚುನಾವಣೆ ಹೊತ್ತಲ್ಲಿ ಧಾರ್ಮಿಕ ಸೌಹಾರ್ದ ಕೆಡಿಸುವ ಯತ್ನ ಎಂಬ ಆಕ್ಷೇಪ ವ್ಯಕ್ತವಾಗಿದೆ.
ಬಪ್ಪನಾಡು ದೇವಸ್ಥಾನದಲ್ಲಿ ಇದೇ ಎಪ್ರಿಲ್ 11ರಂದು ಹಗಲು ರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತರು ದೇವರ ಶಯನಕ್ಕೆ ಮಲ್ಲಿಗೆಯ ಹರಕೆಯನ್ನು ತೀರಿಸುವ ಸಂಪ್ರದಾಯವಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮಲ್ಲಿಗೆ ಹೂ ಮಾರಾಟವಾಗುತ್ತದೆ.
ಹಿಂದಿನಿಂದಲೂ ಇಲ್ಲಿ ಮುಸ್ಲಿಂ ಹಾಗೂ ಹಿಂದು ವ್ಯಾಪಾರಿಗಳು ಜೊತೆಯಾಗಿಯೇ ಮಲ್ಲಿಗೆ ಇನ್ನಿತರ ವ್ಯಾಪಾರ ನಡೆಸುತ್ತ ಬಂದಿದ್ದರು. ಕಳೆದ ವರ್ಷ ಹಿಜಾಬ್ ಗಲಾಟೆ ಬಳಿಕ ಮುಜರಾಯಿ ಇಲಾಖೆ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮ್ ವ್ಯಾಪಾರಿಗಳನ್ನು ದೂರ ಇಡಬೇಕೆಂದು ಹಿಂದು ಸಂಘಟನೆಗಳು ಆಗ್ರಹಿಸಿದ್ದವು. 2022ರ ಜಾತ್ರೆ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಹಳೆಯ ನಿಯಮವನ್ನು ಮುಂದಿಟ್ಟು ಮುಸ್ಲಿಮರು ವ್ಯಾಪಾರ ಮಳಿಗೆ ಹಾಕದಂತೆ ಅವಕಾಶ ನಿರಾಕರಿಸಲಾಗಿತ್ತು. ಈ ಸಲವೂ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಆಡಳಿತ ಮಂಡಳಿ ನಿರ್ಧರಿಸಿದೆ.
ಕರಾವಳಿಯಲ್ಲಿ ಮತ ಸಾಮರಸ್ಯದ ನೆಲೆಯೆಂದು ಖ್ಯಾತಿ ಪಡೆದಿದ್ದ ಬಪ್ಪನಾಡಿನಲ್ಲಿ ಈ ರೀತಿಯ ಬೆಳವಣಿಗೆ ಆಗಿರುವುದು ಚುನಾವಣೆ ಹೊತ್ತಲ್ಲಿ ಮತ್ತೆ ಚರ್ಚೆಗೀಡಾಗಿದೆ.
Mangalore Muslim traders banned from fairs at Bappanadu Sri Durga Parameshwari Temple in Mulki
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm