ಬ್ರೇಕಿಂಗ್ ನ್ಯೂಸ್
08-04-23 07:52 pm Mangaluru correspondent ಕರಾವಳಿ
ಮಂಗಳೂರು, ಎ.8: ಮುಸ್ಲಿಂ ಸಮುದಾಯದ ಬಪ್ಪ ಬ್ಯಾರಿ ನಿರ್ಮಿಸಿದ ದೇವಸ್ಥಾನ ಎಂಬ ಐತಿಹ್ಯ ಹೊಂದಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದುಯೇತರರ ವ್ಯಾಪಾರಕ್ಕೆ ನಿರ್ಬಂಧ ಹೇರಿ, ಬ್ಯಾನರ್ ಹಾಕಲಾಗಿದೆ. ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ದೇಗುಲ ಪರಿಸರದಲ್ಲಿ ನಿಷೇಧ ವಿಧಿಸಲಾಗಿದ್ದು ಚುನಾವಣೆ ಹೊತ್ತಲ್ಲಿ ಧಾರ್ಮಿಕ ಸೌಹಾರ್ದ ಕೆಡಿಸುವ ಯತ್ನ ಎಂಬ ಆಕ್ಷೇಪ ವ್ಯಕ್ತವಾಗಿದೆ.
ಬಪ್ಪನಾಡು ದೇವಸ್ಥಾನದಲ್ಲಿ ಇದೇ ಎಪ್ರಿಲ್ 11ರಂದು ಹಗಲು ರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತರು ದೇವರ ಶಯನಕ್ಕೆ ಮಲ್ಲಿಗೆಯ ಹರಕೆಯನ್ನು ತೀರಿಸುವ ಸಂಪ್ರದಾಯವಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮಲ್ಲಿಗೆ ಹೂ ಮಾರಾಟವಾಗುತ್ತದೆ.
ಹಿಂದಿನಿಂದಲೂ ಇಲ್ಲಿ ಮುಸ್ಲಿಂ ಹಾಗೂ ಹಿಂದು ವ್ಯಾಪಾರಿಗಳು ಜೊತೆಯಾಗಿಯೇ ಮಲ್ಲಿಗೆ ಇನ್ನಿತರ ವ್ಯಾಪಾರ ನಡೆಸುತ್ತ ಬಂದಿದ್ದರು. ಕಳೆದ ವರ್ಷ ಹಿಜಾಬ್ ಗಲಾಟೆ ಬಳಿಕ ಮುಜರಾಯಿ ಇಲಾಖೆ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮ್ ವ್ಯಾಪಾರಿಗಳನ್ನು ದೂರ ಇಡಬೇಕೆಂದು ಹಿಂದು ಸಂಘಟನೆಗಳು ಆಗ್ರಹಿಸಿದ್ದವು. 2022ರ ಜಾತ್ರೆ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಹಳೆಯ ನಿಯಮವನ್ನು ಮುಂದಿಟ್ಟು ಮುಸ್ಲಿಮರು ವ್ಯಾಪಾರ ಮಳಿಗೆ ಹಾಕದಂತೆ ಅವಕಾಶ ನಿರಾಕರಿಸಲಾಗಿತ್ತು. ಈ ಸಲವೂ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಆಡಳಿತ ಮಂಡಳಿ ನಿರ್ಧರಿಸಿದೆ.
ಕರಾವಳಿಯಲ್ಲಿ ಮತ ಸಾಮರಸ್ಯದ ನೆಲೆಯೆಂದು ಖ್ಯಾತಿ ಪಡೆದಿದ್ದ ಬಪ್ಪನಾಡಿನಲ್ಲಿ ಈ ರೀತಿಯ ಬೆಳವಣಿಗೆ ಆಗಿರುವುದು ಚುನಾವಣೆ ಹೊತ್ತಲ್ಲಿ ಮತ್ತೆ ಚರ್ಚೆಗೀಡಾಗಿದೆ.
Mangalore Muslim traders banned from fairs at Bappanadu Sri Durga Parameshwari Temple in Mulki
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm