ಬ್ರೇಕಿಂಗ್ ನ್ಯೂಸ್
08-04-23 08:03 pm Mangaluru correspondent ಕರಾವಳಿ
ಕುಂದಾಪುರ, ಎ.8: ಬೈಂದೂರು ಸಮೀಪದ ಕೋಸಳ್ಳಿ ಫಾಲ್ಸ್ ನಲ್ಲಿ ಶುಕ್ರವಾರ ಸಂಜೆ ಗೆಳೆಯರ ಜೊತೆಗೆ ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಎಸ್ಐ ಕುಮಾರ ಶೆಟ್ಟಿ ಎಂಬವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಪದವಿ ಕಲಿಯುತ್ತಿದ್ದ.
ಚಿರಾಂತ್ ತನ್ನ ಗೆಳಯರೊಂದಿಗೆ ಶುಕ್ರವಾರ ಸಂಜೆ ಕೋಸಳ್ಳಿ ಫಾಲ್ಸ್ ಬಳಿಗೆ ಬಂದಿದ್ದರು. ಈ ವೇಳೆ ಚಿರಾಂತ್ ತನಗೆ ಈಜಲು ಬರುವುದೆಂದು ನೀರಿಗಿಳಿದಿದ್ದ. ಆದರೆ ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ ಶುಕ್ರವಾರ ಸಂಜೆಯೇ ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯರು ರಾತ್ರಿಯ ತನಕ ಹುಡುಕಾಟ ನಡೆಸಿದ್ದಾರೆ. ಶನಿವಾರ ಮತ್ತೆ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಗುಡ್ ಫ್ರೈಡೇ ಸಲುವಾಗಿ ಕಾಲೇಜಿಗೆ ರಜೆ ಇದ್ದುದರಿಂದ ಚಿರಾಂತ್ ತನ್ನ ಗೆಳೆಯರಾದ ಬೈಂದೂರು ಮೂಲದ ಕೀರ್ತನ್ ದೇವಾಡಿಗ ಮತ್ತು ಅಕ್ಷಯ್ ಆಚಾರ್ ಅವರ ಮನೆಗೆ ತೆರಳಿದ್ದರು. ಇತರ ಗೆಳೆಯರೂ ಸೇರಿಕೊಂಡು ಶುಕ್ರವಾರ ಅಪರಾಹ್ನ 3.30ರ ಸುಮಾರಿಗೆ ಫಾಲ್ಸ್ ಬಳಿಗೆ ತೆರಳಿದ್ದರು. ಈ ವೇಳೆ, ಚಿರಾಂತ್ ಮಾತ್ರ ನೀರಿಗೆ ಇಳಿದಿದ್ದರು ಎನ್ನಲಾಗಿದೆ.
The body of the student who was drowned while swimming at Koosalli Falls on Friday evening were found on Saturday April 8. The deceased is identified as Chiranth Shetty (20), son of ASI Kumara Shetty, a resident of Koppa taluk of Chikkamagaluru district. He was studying in second B Com with an aviation course at a private college in Mangaluru.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm