ಬ್ರೇಕಿಂಗ್ ನ್ಯೂಸ್
10-04-23 08:50 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.10 : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ನೂರು ಅಡಿ ಆಳ ಇರುವ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ತೀವ್ರ ಗಾಯಗೊಂಡಿದ್ದ ವೃದ್ಧ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಸಂಬಂಧಿಕರ ಅಂತ್ಯಕ್ರಿಯೆಗೆ ಹೋಗಿ ಭಾನುವಾರ ಮರಳುತ್ತಿದ್ದ ವೇಳೆ ಅವಘಡ ನಡೆದಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ(64) ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ(64), ಪುತ್ರಿ ಪೂರ್ಣಿಮಾ ಶೆಟ್ಟಿ(42), ಮೊಮ್ಮಕ್ಕಳಾದ ಸಮೃದ್ಧ್(10) ಸಾಕ್ಷಿ(14), ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ(64) ಹಾಗೂ ಕಾರು ಚಾಲಕರಾಗಿದ್ದ ಅರುಣಾಕರ ಗೌಡ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀಕೃಷ್ಣ ಆಸ್ಪತ್ರೆ, ಉಜಿರೆಯ ಎಸ್ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರೋಜಿನಿ ಶೆಟ್ಟಿ (64) ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪುಷ್ಪಾವತಿ ಶೆಟ್ಟಿ ಕಾರಿನ ಚಾಲಕ ಅರುಣಾಕರ ಗೌಡ ವಿರುದ್ಧ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ನಡೆದಿದೆ ಎಂದು ದೂರು ನೀಡಿದ್ದಾರೆ.
In a tragic incident, a car traveling from Kottigehara towards Ujire lost control near the second turn of Charmadi Ghat road and rolled off 100 meters into a gorge on Sunday night. A woman was killed and several others have been injured in the road mishap.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm