ಬ್ರೇಕಿಂಗ್ ನ್ಯೂಸ್
10-04-23 08:50 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.10 : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ನೂರು ಅಡಿ ಆಳ ಇರುವ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ತೀವ್ರ ಗಾಯಗೊಂಡಿದ್ದ ವೃದ್ಧ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಸಂಬಂಧಿಕರ ಅಂತ್ಯಕ್ರಿಯೆಗೆ ಹೋಗಿ ಭಾನುವಾರ ಮರಳುತ್ತಿದ್ದ ವೇಳೆ ಅವಘಡ ನಡೆದಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ(64) ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ(64), ಪುತ್ರಿ ಪೂರ್ಣಿಮಾ ಶೆಟ್ಟಿ(42), ಮೊಮ್ಮಕ್ಕಳಾದ ಸಮೃದ್ಧ್(10) ಸಾಕ್ಷಿ(14), ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ(64) ಹಾಗೂ ಕಾರು ಚಾಲಕರಾಗಿದ್ದ ಅರುಣಾಕರ ಗೌಡ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀಕೃಷ್ಣ ಆಸ್ಪತ್ರೆ, ಉಜಿರೆಯ ಎಸ್ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರೋಜಿನಿ ಶೆಟ್ಟಿ (64) ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪುಷ್ಪಾವತಿ ಶೆಟ್ಟಿ ಕಾರಿನ ಚಾಲಕ ಅರುಣಾಕರ ಗೌಡ ವಿರುದ್ಧ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ನಡೆದಿದೆ ಎಂದು ದೂರು ನೀಡಿದ್ದಾರೆ.
In a tragic incident, a car traveling from Kottigehara towards Ujire lost control near the second turn of Charmadi Ghat road and rolled off 100 meters into a gorge on Sunday night. A woman was killed and several others have been injured in the road mishap.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm