ಬ್ರೇಕಿಂಗ್ ನ್ಯೂಸ್
12-04-23 09:11 pm Mangalore Correspondent ಕರಾವಳಿ
ಪುತ್ತೂರು, ಎ.12: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಊರಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ. ಟಿಕೆಟ್ ಘೋಷಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ಪುತ್ತೂರಿನಲ್ಲಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾವಿರಾರು ಕಾರ್ಯಕರ್ತರು ಸೇರಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪುತ್ತೂರಿನಲ್ಲಿ ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕೆಂದು ಕಳೆದ ಎರಡು ತಿಂಗಳಿನಿಂದ ಭಾರೀ ಅಭಿಯಾನ ನಡೆದಿತ್ತು. ಈ ನಡುವೆ, ಶಾಸಕ ಸಂಜೀವ ಮಠಂದೂರು ಮಳೆಗಾಲದಲ್ಲಿ ಅಣಬೆಗಳು ಬಂದಂತೆ ಎಂದು ಪರೋಕ್ಷವಾಗಿ ಅರುಣ್ ಪುತ್ತಿಲರನ್ನು ಟೀಕಿಸಿದ್ದು ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿತ್ತು. ಶಾಸಕರನ್ನು ಬಳಿಕ ರಸ್ತೆಯಲ್ಲಿ ಅಡ್ಡ ಹಾಕಿ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಅರುಣ್ ಪುತ್ತಿಲ ಹೆಸರನ್ನು ಪರಿಗಣಿಸದೆ ರೇಸಲ್ಲೇ ಇಲ್ಲದ ಆಶಾ ತಿಮ್ಮಪ್ಪ ಗೌಡರಿಗೆ ಪುತ್ತೂರು ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ಸೇರಿ ಆಕ್ರೋಶ ಹೊರಹಾಕಿದ್ದಾರೆ.

ಪುತ್ತೂರಿನ ಸಾಲ್ಮರದಲ್ಲಿ ಖಾಸಗಿ ಸಭಾಂಗಣದಲ್ಲಿ ಸಾವಿರಾರು ಕಾರ್ಯಕರ್ತರು ಸಭೆ ಸೇರಿದ್ದು ಅರುಣ್ ಪುತ್ತಿಲ ಪರವಾಗಿ ಘೋಷಣೆ ಕೂಗಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಭಿಮಾನಿಗಳು ಒತ್ತಾಯ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಅರುಣ್ ಪುತ್ತಿಲ, ಈ ಬಗ್ಗೆ ಹಿರಿಯರೊಂದಿಗೆ ಚರ್ಚಿಸಿ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಖಾಸಗಿ ಫೋಟೊ ಲೀಕ್ ಆದಬಳಿಕ ಅವರು ಸ್ಥಾನ ಕಳಕೊಳ್ಳುವುದು ಖಾತ್ರಿಯಾಗಿತ್ತು. ನಳಿನ್ ಆಪ್ತ ಹರೀಶ್ ಕಂಜಿಪಿಲಿ, ಹಿಂದು ಮುಖಂಡ ಅರುಣ್ ಪುತ್ತಿಲ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಸುಳ್ಯ ಮೂಲದ ಗೌಡ ಸಮುದಾಯದ ಆಶಾ ತಿಮ್ಮಪ್ಪ ಗೌಡರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಇದರಿಂದ ಅರುಣ್ ಪುತ್ತಿಲ ಬೆಂಬಲುಗರು ಸಿಟ್ಟುಗೊಂಡಿದ್ದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಆಶಾ ತಿಮ್ಮಪ್ಪ ಈ ಹಿಂದೆ ಜಿಪಂ ಅಧ್ಯಕ್ಷೆ ಆಗಿದ್ದರೂ, ಪುತ್ತೂರಿನಲ್ಲಿ ಕಾರ್ಯಕರ್ತರ ಸಂಪರ್ಕ ಹೊಂದಿಲ್ಲ. ಜೊತೆಗೆ, ಪಕ್ಷ ಮತ್ತು ಸಂಘ ಪರಿವಾರದಲ್ಲಿ ಸಕ್ರಿಯವಾಗಿಲ್ಲ. ಈ ಕಾರಣಕ್ಕೆ ಪುತ್ತೂರಿನ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದಾರೆ. ಪಕ್ಷದ ಅಭ್ಯರ್ಥಿ ವಿರುದ್ಧವೇ ಬಂಡಾಯ ಸ್ಪರ್ಧೆಗಿಳಿಸಲು ಮುಂದಾಗಿದ್ದಾರೆ.
Puttur Arun Kumar Puthila followers gather in thousands after he loses BJP ticket. His followers gathered in large number demanding High command to give him ticket for puttur constituency.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm