ಬ್ರೇಕಿಂಗ್ ನ್ಯೂಸ್
12-04-23 09:11 pm Mangalore Correspondent ಕರಾವಳಿ
ಪುತ್ತೂರು, ಎ.12: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಊರಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ. ಟಿಕೆಟ್ ಘೋಷಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ಪುತ್ತೂರಿನಲ್ಲಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾವಿರಾರು ಕಾರ್ಯಕರ್ತರು ಸೇರಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪುತ್ತೂರಿನಲ್ಲಿ ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕೆಂದು ಕಳೆದ ಎರಡು ತಿಂಗಳಿನಿಂದ ಭಾರೀ ಅಭಿಯಾನ ನಡೆದಿತ್ತು. ಈ ನಡುವೆ, ಶಾಸಕ ಸಂಜೀವ ಮಠಂದೂರು ಮಳೆಗಾಲದಲ್ಲಿ ಅಣಬೆಗಳು ಬಂದಂತೆ ಎಂದು ಪರೋಕ್ಷವಾಗಿ ಅರುಣ್ ಪುತ್ತಿಲರನ್ನು ಟೀಕಿಸಿದ್ದು ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿತ್ತು. ಶಾಸಕರನ್ನು ಬಳಿಕ ರಸ್ತೆಯಲ್ಲಿ ಅಡ್ಡ ಹಾಕಿ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಅರುಣ್ ಪುತ್ತಿಲ ಹೆಸರನ್ನು ಪರಿಗಣಿಸದೆ ರೇಸಲ್ಲೇ ಇಲ್ಲದ ಆಶಾ ತಿಮ್ಮಪ್ಪ ಗೌಡರಿಗೆ ಪುತ್ತೂರು ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ಸೇರಿ ಆಕ್ರೋಶ ಹೊರಹಾಕಿದ್ದಾರೆ.

ಪುತ್ತೂರಿನ ಸಾಲ್ಮರದಲ್ಲಿ ಖಾಸಗಿ ಸಭಾಂಗಣದಲ್ಲಿ ಸಾವಿರಾರು ಕಾರ್ಯಕರ್ತರು ಸಭೆ ಸೇರಿದ್ದು ಅರುಣ್ ಪುತ್ತಿಲ ಪರವಾಗಿ ಘೋಷಣೆ ಕೂಗಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಭಿಮಾನಿಗಳು ಒತ್ತಾಯ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಅರುಣ್ ಪುತ್ತಿಲ, ಈ ಬಗ್ಗೆ ಹಿರಿಯರೊಂದಿಗೆ ಚರ್ಚಿಸಿ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಖಾಸಗಿ ಫೋಟೊ ಲೀಕ್ ಆದಬಳಿಕ ಅವರು ಸ್ಥಾನ ಕಳಕೊಳ್ಳುವುದು ಖಾತ್ರಿಯಾಗಿತ್ತು. ನಳಿನ್ ಆಪ್ತ ಹರೀಶ್ ಕಂಜಿಪಿಲಿ, ಹಿಂದು ಮುಖಂಡ ಅರುಣ್ ಪುತ್ತಿಲ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಸುಳ್ಯ ಮೂಲದ ಗೌಡ ಸಮುದಾಯದ ಆಶಾ ತಿಮ್ಮಪ್ಪ ಗೌಡರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಇದರಿಂದ ಅರುಣ್ ಪುತ್ತಿಲ ಬೆಂಬಲುಗರು ಸಿಟ್ಟುಗೊಂಡಿದ್ದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಆಶಾ ತಿಮ್ಮಪ್ಪ ಈ ಹಿಂದೆ ಜಿಪಂ ಅಧ್ಯಕ್ಷೆ ಆಗಿದ್ದರೂ, ಪುತ್ತೂರಿನಲ್ಲಿ ಕಾರ್ಯಕರ್ತರ ಸಂಪರ್ಕ ಹೊಂದಿಲ್ಲ. ಜೊತೆಗೆ, ಪಕ್ಷ ಮತ್ತು ಸಂಘ ಪರಿವಾರದಲ್ಲಿ ಸಕ್ರಿಯವಾಗಿಲ್ಲ. ಈ ಕಾರಣಕ್ಕೆ ಪುತ್ತೂರಿನ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದಾರೆ. ಪಕ್ಷದ ಅಭ್ಯರ್ಥಿ ವಿರುದ್ಧವೇ ಬಂಡಾಯ ಸ್ಪರ್ಧೆಗಿಳಿಸಲು ಮುಂದಾಗಿದ್ದಾರೆ.
Puttur Arun Kumar Puthila followers gather in thousands after he loses BJP ticket. His followers gathered in large number demanding High command to give him ticket for puttur constituency.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm