ಬ್ರೇಕಿಂಗ್ ನ್ಯೂಸ್
13-04-23 01:16 pm Mangalore Correspondent ಕರಾವಳಿ
ಮಂಗಳೂರು, ಎ.13 : ಕಾಂಗ್ರೆಸ್ ನವರಿಗೆ 60-65 ಕ್ಷೇತ್ರಗಳಿಗೆ ಅಭ್ಯರ್ಥಿ ಇಲ್ಲ, ಅದಕ್ಕೆ 160 ಕ್ಷೇತ್ರಕ್ಕೆ ಅಭ್ಯರ್ಥಿ ಮಾಡಿ ನಿಲ್ಲಿಸಿದ್ದಾರೆ. ಅವರದ್ದು ಆರಂಭ ಶೂರತ್ವ ಅಷ್ಟೇ, ಈಗ ಬೇರೆ ಕಡೆಯಿಂದ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರೋದೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ, ಇನ್ನು 12 ಕಡೆಯಷ್ಟೇ ಉಳಿದಿದೆ. ಅದು ಶೀಘ್ರದಲ್ಲೇ ಆಗತ್ತೆ. ಕೆಲವು ಕಡೆ ಅಪೇಕ್ಷಿತರು, ಆಕಾಂಕ್ಷಿಗಳು, ಎಂಎಲ್ ಸಿಗಳು ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಇನ್ನೊಂದು ವಾರದಲ್ಲಿ ಬಹುತೇಕ ಕಡೆ ಭಿನ್ನಮತ ಶಮನ ಆಗುತ್ತೆ, ಹಿರಿಯರು ಮಾತನಾಡ್ತಾ ಇದಾರೆ. ಹಿರಿಯರ ಜೊತೆಗೆ ನಾನು ಮತ್ತು ಹೈಕಮಾಂಡ್ ಕಡೆಯ ನಾಯಕರು ಕೂಡ ಮಾತನಾಡ್ತಿದಾರೆ, ಸಮಸ್ಯೆ ಬಗೆಹರಿಯೋ ವಿಶ್ವಾಸ ಇದೆ.
ಸವದಿ ರಾಜಿನಾಮೆ ಕುರಿತ ಪ್ರಶ್ನೆಗೆ, ಸವದಿ ಹಿರಿಯರಿದ್ದಾರೆ, ಅವರಿಗೆ ಭಾವನೆ ಇದೆ, ಸುಧೀರ್ಘ ರಾಜಕೀಯ ಜೀವನದಲ್ಲಿ ಇದ್ದಾರೆ. ಅವರ ಕ್ಷೇತ್ರದ ಜನರ ವಿಶ್ವಾಸ ಅವರು ಉಳಿಸಿಕೊಳ್ಳಬೇಕು. ಆ ಕಡೆಯಿಂದಲೂ ಅವರಿಗೆ ಒತ್ತಡ ಇದೆ, ಸಮಯ ಬೇಕು. ಆದಷ್ಟು ಬೇಗ ಅವರ ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.
ನೆಹರೂ ಒಲೇಕಾರ್ ಆರೋಪದ ಪ್ರಶ್ನೆಗೆ, ಅವರು ಯಾವ ಆರೋಪ ಬೇಕಾದ್ರೂ ಮಾಡಲಿ. 1500 ಕೋಟಿ ಅಲ್ಲ, ಯಾವುದೇ ಆರೋಪ ಇದ್ದರೂ ದಾಖಲೆ ಸಮೇತ ಮಾಡಲಿ. ನಾವು ಎದುರಿಸುತ್ತೇವೆ. ಹೇಳಿಕೆಗಳಿಂದ ಹಗರಣ ಆಗಲ್ಲ, ದಾಖಲೆ ಸಹಿತ ಮಾಡಲಿ, ಸತ್ಯಾಸತ್ಯತೆ ಹೊರಬರಲಿ ಎಂದರು.
ಟಿಕೆಟ್ ಸಿಗದವರು ಪಕ್ಷ ಬಿಟ್ಟು ಹೋಗುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ, ಅದು ಆಗ್ತಾ ಇರುತ್ತೆ. ಪಕ್ಷದೊಳಗಿನ ಬಂಡಾಯ ಸರಿಪಡಿಸ್ತಾ ಇದೀವಿ, ಕಾರ್ಯಕರ್ತರು ಮತ್ತು ಪಕ್ಷ ಗಟ್ಟಿ ಇರೋದ್ರಿಂದ ಈ ರೀತಿಯ ಬೆಳವಣಿಗೆಯಿಂದ ಡ್ಯಾಮೇಜ್ ಆಗಲ್ಲ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.
Congress doesn't have efficient leaders, so trying to catch up BJP MLAS slams Bommai in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm