ಬ್ರೇಕಿಂಗ್ ನ್ಯೂಸ್
13-04-23 07:30 pm Mangalore Correspondent ಕರಾವಳಿ
ಮಂಗಳೂರು, ಎ.13 : ಪುತ್ತೂರಿನ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡಿದ್ದ ಕಾರ್ಯಕರ್ತರು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹಾಗು ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಅವರು ಶಾಸಕ ಮಠಂದೂರು ಅವರನ್ನು ಸಮಾಧಾನ ಪಡಿಸಲು ಪುತ್ತೂರಿನ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಜಿಲ್ಲಾಧ್ಯಕ್ಷರನ್ನು ತಡೆದು ನಿಲ್ಲಿಸಿದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಜೀವ ಮಠಂದೂರು ಅವರನ್ನ ಕಡೆಗಣಿಸಲು ಕಾರಣವೇನು..? ಟಿಕೆಟ್ ವಿಚಾರದಲ್ಲಿ ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ..? ಹಾಗಾದರೆ ನೀವು ಅ ಹುದ್ದೆಯಲ್ಲಿರುವುದು ಯಾಕೆ..?ಸಂಜೀವ ಮಠಂದೂರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ. ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಿಕೊಳ್ಳಿ ಎಂದು ಅಸಹನೆ ವ್ಯಕ್ತಪಡಿಸಿದರು.
ಮನೆಯ ಒಳಕ್ಕೆ ಹೋಗಲು ಬಿಡದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿಸಿದ ಜಿಲ್ಲಾಧ್ಯಕ್ಷ ಸುದರ್ಶನ್, ತನಗೂ ಮೂರು ಬಾರಿ ಟಿಕೆಟ್ ಪಡೆಯಲು ಯತ್ನ ಮಾಡಿದರೂ ಅವಕಾಶ ಸಿಗಲಿಲ್ಲ. ಹಾಗಂತ, ನಾನು ಪಕ್ಷದ ಬಗ್ಗೆ ಅಸಹನೆ ತೋರುವುದು, ದೂರ ನಿಂತರಾಗುವುದೇ ಎಂದು ಮರು ಪ್ರಶ್ನೆ ಹಾಕಿದರು. ಈಗ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನೀಡದೇ ಇರುವುದರ ಕಾರಣವೇನು ಎಂಬ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಕಾರ್ಯಕರ್ತರು ಆಗ್ರಹಿಸಿದರು. ಒಂದು ಹಂತದಲ್ಲಿ ನೀವು ವಿಡಿಯೋ ಮಾಡಬೇಡಿ ಎಂದು ಸುದರ್ಶನ್ ಕೇಳಿಕೊಂಡರೂ, ಕಾರ್ಯಕರ್ತರು ಕೇಳಲಿಲ್ಲ. ವಿಡಿಯೋ ನಮಗೆ ಬೇಕೆಂದು ಹೇಳಿ ವಿಡಿಯೋ ಮಾಡಿದ್ದಾರೆ. ಇದೀಗ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Puttur Denial of ticket sanjeeva Matandoor supporters take BJP district president Sudarshan Moodbidri to task. Supporters of disgruntled MLA Sanjeeva Matandoor expressed their discontentment with BJP district president Sudarshan Moodbidri for denying a BJP ticket to Matandoor in the upcoming legislative assembly elections in the state.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm