ಬ್ರೇಕಿಂಗ್ ನ್ಯೂಸ್
15-04-23 09:56 pm Mangalore Correspondent ಕರಾವಳಿ
ಸುಳ್ಯ, ಎ.15: ಸುಳ್ಯದಲ್ಲಿ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ವಿರುದ್ಧ ಕಾರ್ಯಕರ್ತರು ಬಂಡಾಯ ಎದ್ದಿರುವ ಬಗ್ಗೆ ಸುಳ್ಯದ ಚುನಾವಣಾ ಕಚೇರಿಯಲ್ಲೇ ಅಭಿಪ್ರಾಯ ಸಂಗ್ರಹ ನಡೆಯಿತು. ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದರು.
ಸಭೆಯಲ್ಲಿ 400ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಸೇರಿದ ಕಾರ್ಯಕರ್ತರ ಪೈಕಿ 90 ಶೇಕಡಾ ಮಂದಿ ನಂದಕುಮಾರ್ ಅವರೇ ತಮ್ಮ ಅಭ್ಯರ್ಥಿಯಾಗಬೇಕೆಂದು ಅಹವಾಲು ಮಂಡಿಸಿದ್ದಾರೆ. ಈ ನಡುವೆ, ಕಾಂಗ್ರೆಸ್ ಮುಖಂಡ ಧನಂಜಯ ಅಡ್ಪಂಗಾಯ ಅವರು ಕಾರ್ಯಕರ್ತರ ಅಭಿಪ್ರಾಯ ಕೇಳಬೇಕಿಲ್ಲ. ಮುಖಂಡರ ಅಭಿಪ್ರಾಯ ಮಾತ್ರ ಸಾಕು ಎಂದು ಹೇಳಿದ್ದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಕೆಲಹೊತ್ತು ಅಡ್ಪಂಗಾಯ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ರಮಾನಾಥ ರೈ ಪ್ರತಿಕ್ರಿಯಿಸಿ, ನಾವೆಲ್ಲ ಕಾಂಗ್ರೆಸಿಗರು. ಪಕ್ಷದ ಕಾರ್ಯಕರ್ತರು. ಮುಖಂಡರು ಎನ್ನುವ ಭೇದ ಇಲ್ಲ. ಎಲ್ಲರ ಅಭಿಪ್ರಾಯಕ್ಕೂ ಸಮಾನ ಆದ್ಯತೆ ಇದೆ. ನನಗೆ ವಸ್ತುಸ್ಥಿತಿಯ ವರದಿ ಕೊಡಲು ಹೇಳಿದ್ದಾರೆ. ಯಥಾವತ್ ವರದಿಯನ್ನು ಕೊಡುತ್ತೇನೆ ಎಂದು ಹೇಳಿದರು.

ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ ಮತ್ತಿತರರು ಸೇರಿ ಕೆಲವು ನಾಯಕರಷ್ಟೇ ಕೃಷ್ಣಪ್ಪ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತರಿಂದ ತೊಡಗಿ ಕಡಬ ಮತ್ತು ಸುಳ್ಯ ಬ್ಲಾಕ್ ಮಟ್ಟದ ನಾಯಕರೆಲ್ಲ ನಂದಕುಮಾರ್ ಪರವಾಗಿ ಅಭಿಪ್ರಾಯ ಹೇಳಿದರು. ಸಭೆಯಲ್ಲಿ ನಂದಕುಮಾರ್ ಕೂಡ ಉಪಸ್ಥಿತರಿದ್ದರು. ಜಿಗಣಿ ಕೃಷ್ಣಪ್ಪ ಸುಳ್ಯ ಕ್ಷೇತ್ರದಲ್ಲಿ ಇದ್ದರೂ, ಸಭೆಗೆ ಬಂದಿರಲಿಲ್ಲ. ಸುಳ್ಯದಲ್ಲಿ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ವಿರುದ್ಧ ಕಾರ್ಯಕರ್ತರ ಅಸಹಕಾರ, ಆಕ್ರೋಶದ ಹಿನ್ನೆಲೆಯಲ್ಲಿ ಕ್ಷೇತ್ರದ ವಸ್ತುಸ್ತಿತಿ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ವರದಿ ಕೊಡಲು ಮಾಜಿ ಸಚಿವ ರಮಾನಾಥ ರೈಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚಿಸಿದ್ದರು.
Sullia Nandakumar bags more favour in sullia by Congress members, Ramanath Rai to send report to Kpcc.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm