ಬ್ರೇಕಿಂಗ್ ನ್ಯೂಸ್
16-04-23 10:04 pm Udupi Correspondent ಕರಾವಳಿ
ಉಡುಪಿ, ಎ.16 : ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಮುನಿಯಾಲು ಉದಯಕುಮಾರ್ ಶೆಟ್ಟಿಗೆ ಘೋಷಣೆ ಬೆನ್ನಲ್ಲೇ ಪಕ್ಷದೊಳಗೆ ಭಿನ್ನಮತ ಸ್ಪೋಟವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿ ಪರ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆ ಆಗುತ್ತೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ, ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಒಬ್ಬರೇ ಒಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟಿಕೆಟ್ ಮಾರಾಟ ಮಾಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅವನತಿಗೆ ಡಿಕೆ ಶಿವಕುಮಾರ್ ಕಾರಣ. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಗೆ ವಿನಯ್ ಕುಮಾರ್ ಸೊರಕೆ ಕಾರಣ. ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದರೂ ಸೊರಕೆಯಂತವರಿಗೆ ಮತ್ತೆ ಮತ್ತೆ ಅವಕಾಶ ಯಾಕೆ ಕೊಡುತ್ತಿದ್ದಾರೆ ಎಂದರು.
ಕಾರ್ಕಳದಲ್ಲಿ ಗುತ್ತಿಗೆದಾರ ಉದಯ ಕುಮಾರ್ ಶೆಟ್ಟಿಗೆ ಯಾವ ಆಧಾರದ ಮೇಲೆ ಟಿಕೆಟ್ ನೀಡಲಾಗಿದೆ. ಅವರು ಒಮ್ಮೆ ಸುನಿಲ್ ಕುಮಾರ್ ಜತೆ, ಒಮ್ಮೆ ನಳಿನ್ ಕುಮಾರ್ ಜತೆ, ಮತ್ತೊಮ್ಮೆ ಪ್ರಭಾಕರ ಭಟ್ ಜತೆಗೆ ಗುರುತಿಸಿಕೊಳ್ಳುತ್ತಾರೆ. ಇವರ ಮೂಲಕ ಟೆಂಡರ್ ಪಡೆದು ಕಳಪೆ ಕಾಮಗಾರಿ ನಡೆಸುತ್ತಾರೆ. ಬಿಜೆಪಿ ಜೊತೆಗೆ ಸಖ್ಯ ಇರುವವರಿಗೆ ಟಿಕೆಟ್ ನೀಡುವುದು ಎಷ್ಟು ಸರಿ. ಇದರಿಂದ ಪಕ್ಷದ ಉದ್ಧಾರ ಸಾಧ್ಯವೇ ಎಂದು ಪ್ರಶ್ನಿಸಿದರು.
ಪಕ್ಷದ ಕೆಲಸಕ್ಕಾಗಿ ನಾನು ಈವರೆಗೂ ಕೋಟ್ಯಾಂತರ ರೂ. ವೆಚ್ಚ ಮಾಡಿದ್ದೇನೆ. ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ. ಜಾತಿ ಆಧಾರ ನೋಡದೆ ಪಕ್ಷ ಸಂಘಟನೆ ಮಾಡಿದವರಿಗೆ ಅವಕಾಶ ಕಲ್ಪಿಸಬೇಕು ಎಂದ ಅವರು, ನನ್ನ ಮತ ಕಾಂಗ್ರೆಸ್ ಗೆ. ಪಕ್ಷ ಬಿಟ್ಟು ಹೋಗಲ್ಲ. ಆದರೆ ಈ ಬಾರಿ ಪ್ರಚಾರಕ್ಕೆ ಹೋಗುವುದಿಲ್ಲ. ತತ್ವ ಸಿದ್ಧಾಂತದ ಮೇಲೆ ಬದುಕುತ್ತಿದ್ದೇನೆ, ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
Manjunath Poojary Mudradi resigns from president of Hebri block Congress after ticket given to Udaykumar.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am