ಬ್ರೇಕಿಂಗ್ ನ್ಯೂಸ್
16-04-23 10:04 pm Udupi Correspondent ಕರಾವಳಿ
ಉಡುಪಿ, ಎ.16 : ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಮುನಿಯಾಲು ಉದಯಕುಮಾರ್ ಶೆಟ್ಟಿಗೆ ಘೋಷಣೆ ಬೆನ್ನಲ್ಲೇ ಪಕ್ಷದೊಳಗೆ ಭಿನ್ನಮತ ಸ್ಪೋಟವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿ ಪರ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆ ಆಗುತ್ತೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ, ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಒಬ್ಬರೇ ಒಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟಿಕೆಟ್ ಮಾರಾಟ ಮಾಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅವನತಿಗೆ ಡಿಕೆ ಶಿವಕುಮಾರ್ ಕಾರಣ. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಗೆ ವಿನಯ್ ಕುಮಾರ್ ಸೊರಕೆ ಕಾರಣ. ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದರೂ ಸೊರಕೆಯಂತವರಿಗೆ ಮತ್ತೆ ಮತ್ತೆ ಅವಕಾಶ ಯಾಕೆ ಕೊಡುತ್ತಿದ್ದಾರೆ ಎಂದರು.
ಕಾರ್ಕಳದಲ್ಲಿ ಗುತ್ತಿಗೆದಾರ ಉದಯ ಕುಮಾರ್ ಶೆಟ್ಟಿಗೆ ಯಾವ ಆಧಾರದ ಮೇಲೆ ಟಿಕೆಟ್ ನೀಡಲಾಗಿದೆ. ಅವರು ಒಮ್ಮೆ ಸುನಿಲ್ ಕುಮಾರ್ ಜತೆ, ಒಮ್ಮೆ ನಳಿನ್ ಕುಮಾರ್ ಜತೆ, ಮತ್ತೊಮ್ಮೆ ಪ್ರಭಾಕರ ಭಟ್ ಜತೆಗೆ ಗುರುತಿಸಿಕೊಳ್ಳುತ್ತಾರೆ. ಇವರ ಮೂಲಕ ಟೆಂಡರ್ ಪಡೆದು ಕಳಪೆ ಕಾಮಗಾರಿ ನಡೆಸುತ್ತಾರೆ. ಬಿಜೆಪಿ ಜೊತೆಗೆ ಸಖ್ಯ ಇರುವವರಿಗೆ ಟಿಕೆಟ್ ನೀಡುವುದು ಎಷ್ಟು ಸರಿ. ಇದರಿಂದ ಪಕ್ಷದ ಉದ್ಧಾರ ಸಾಧ್ಯವೇ ಎಂದು ಪ್ರಶ್ನಿಸಿದರು.
ಪಕ್ಷದ ಕೆಲಸಕ್ಕಾಗಿ ನಾನು ಈವರೆಗೂ ಕೋಟ್ಯಾಂತರ ರೂ. ವೆಚ್ಚ ಮಾಡಿದ್ದೇನೆ. ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ. ಜಾತಿ ಆಧಾರ ನೋಡದೆ ಪಕ್ಷ ಸಂಘಟನೆ ಮಾಡಿದವರಿಗೆ ಅವಕಾಶ ಕಲ್ಪಿಸಬೇಕು ಎಂದ ಅವರು, ನನ್ನ ಮತ ಕಾಂಗ್ರೆಸ್ ಗೆ. ಪಕ್ಷ ಬಿಟ್ಟು ಹೋಗಲ್ಲ. ಆದರೆ ಈ ಬಾರಿ ಪ್ರಚಾರಕ್ಕೆ ಹೋಗುವುದಿಲ್ಲ. ತತ್ವ ಸಿದ್ಧಾಂತದ ಮೇಲೆ ಬದುಕುತ್ತಿದ್ದೇನೆ, ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
Manjunath Poojary Mudradi resigns from president of Hebri block Congress after ticket given to Udaykumar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm