ಬ್ರೇಕಿಂಗ್ ನ್ಯೂಸ್
16-04-23 10:04 pm Udupi Correspondent ಕರಾವಳಿ
ಉಡುಪಿ, ಎ.16 : ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಮುನಿಯಾಲು ಉದಯಕುಮಾರ್ ಶೆಟ್ಟಿಗೆ ಘೋಷಣೆ ಬೆನ್ನಲ್ಲೇ ಪಕ್ಷದೊಳಗೆ ಭಿನ್ನಮತ ಸ್ಪೋಟವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿ ಪರ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆ ಆಗುತ್ತೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ, ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಒಬ್ಬರೇ ಒಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟಿಕೆಟ್ ಮಾರಾಟ ಮಾಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅವನತಿಗೆ ಡಿಕೆ ಶಿವಕುಮಾರ್ ಕಾರಣ. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಗೆ ವಿನಯ್ ಕುಮಾರ್ ಸೊರಕೆ ಕಾರಣ. ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದರೂ ಸೊರಕೆಯಂತವರಿಗೆ ಮತ್ತೆ ಮತ್ತೆ ಅವಕಾಶ ಯಾಕೆ ಕೊಡುತ್ತಿದ್ದಾರೆ ಎಂದರು.
ಕಾರ್ಕಳದಲ್ಲಿ ಗುತ್ತಿಗೆದಾರ ಉದಯ ಕುಮಾರ್ ಶೆಟ್ಟಿಗೆ ಯಾವ ಆಧಾರದ ಮೇಲೆ ಟಿಕೆಟ್ ನೀಡಲಾಗಿದೆ. ಅವರು ಒಮ್ಮೆ ಸುನಿಲ್ ಕುಮಾರ್ ಜತೆ, ಒಮ್ಮೆ ನಳಿನ್ ಕುಮಾರ್ ಜತೆ, ಮತ್ತೊಮ್ಮೆ ಪ್ರಭಾಕರ ಭಟ್ ಜತೆಗೆ ಗುರುತಿಸಿಕೊಳ್ಳುತ್ತಾರೆ. ಇವರ ಮೂಲಕ ಟೆಂಡರ್ ಪಡೆದು ಕಳಪೆ ಕಾಮಗಾರಿ ನಡೆಸುತ್ತಾರೆ. ಬಿಜೆಪಿ ಜೊತೆಗೆ ಸಖ್ಯ ಇರುವವರಿಗೆ ಟಿಕೆಟ್ ನೀಡುವುದು ಎಷ್ಟು ಸರಿ. ಇದರಿಂದ ಪಕ್ಷದ ಉದ್ಧಾರ ಸಾಧ್ಯವೇ ಎಂದು ಪ್ರಶ್ನಿಸಿದರು.
ಪಕ್ಷದ ಕೆಲಸಕ್ಕಾಗಿ ನಾನು ಈವರೆಗೂ ಕೋಟ್ಯಾಂತರ ರೂ. ವೆಚ್ಚ ಮಾಡಿದ್ದೇನೆ. ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ. ಜಾತಿ ಆಧಾರ ನೋಡದೆ ಪಕ್ಷ ಸಂಘಟನೆ ಮಾಡಿದವರಿಗೆ ಅವಕಾಶ ಕಲ್ಪಿಸಬೇಕು ಎಂದ ಅವರು, ನನ್ನ ಮತ ಕಾಂಗ್ರೆಸ್ ಗೆ. ಪಕ್ಷ ಬಿಟ್ಟು ಹೋಗಲ್ಲ. ಆದರೆ ಈ ಬಾರಿ ಪ್ರಚಾರಕ್ಕೆ ಹೋಗುವುದಿಲ್ಲ. ತತ್ವ ಸಿದ್ಧಾಂತದ ಮೇಲೆ ಬದುಕುತ್ತಿದ್ದೇನೆ, ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
Manjunath Poojary Mudradi resigns from president of Hebri block Congress after ticket given to Udaykumar.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm