ಬ್ರೇಕಿಂಗ್ ನ್ಯೂಸ್
17-04-23 10:27 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಸೋಮವಾರ ಉದ್ಘಾಟನೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಪದ್ಮನಾಭ್ ಅಮೀನ್ ಮತ್ತು ಸದಾಶಿವ ಅಮೀನ್ ಅವರು ದೀಪ ಬೆಳಗಿಸುವ ಮೂಲಕ ಚುನಾವಣಾ ಕಚೇರಿ ವಿಧ್ಯುಕ್ತವಾಗಿ ಉದ್ಘಾಟನೆ ಮಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್. ಮಸೂದ್ ಮಾತನಾಡಿ, ಜೆ.ಆರ್.ಲೋಬೊ ಅವರನ್ನು ಶಾಸಕರನ್ನಾಗಿ ಮಾಡಲು ಪಕ್ಷದ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಅವರ ಗೆಲುವಿಗೆ ಅವಿರತವಾಗಿ ಶ್ರಮಿಸಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ಮಾತನಾಡಿ, ಸಂವಿಧಾನ ಉಳಿಸಿ ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಈ ಚುನಾವಣೆ ಅತ್ಯಂತ ಮಹತ್ವದ್ದು. ಕ್ಷೇತ್ರದ ಅಭಿವೃದ್ಧಿಗೆ ಜನರು ಚುನಾವಣೆಯಲ್ಲಿ ಆದ್ಯತೆ ನೀಡಬೇಕು. ನಗರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಸಮಾಜದಲ್ಲಿ ಶಾಂತಿ ಸೌಹಾರ್ದ ಕಾಪಾಡಲು ಹಾಗೂ ಅಭಿವೃದ್ಧಿಗೆ ಜನರು ಬದಲಾವಣೆ ತಂದು ರಾಜ್ಯದಲ್ಲಿ ಉತ್ತಮ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಧರ್ಮಗುರುಗಳಾದ ರಿಯಾಝ್ ಫೈಝಿ ಮತ್ತು ಫಾದರ್ ರೋನ್ಸನ್ ಪಿಂಟೊ, ಪುರೋಹಿತ ವಿಶ್ವನಾಥ ಭಟ್ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ರಾಜಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ದಕ್ಷಿಣ ಕನ್ನಡ ಕಾಂಗ್ರೆಸ್ ಪಕ್ಷದ ಚುನಾವಣಾ ಸಂಯೋಜಕಿ ಶಿಭಾ ರಾಮಚಂದ್ರನ್, ಲೋಬೊ ಅವರ ಪತ್ನಿ ಫಿಲೋಮಿನಾ ಲೋಬೊ, ಕಾಂಗ್ರೆಸ್ ಹಿರಿಯ ಧುರೀಣ ಸುರೇಶ್ ಬಲ್ಲಾಳ್, ಶಶಿಧರ್ ಹೆಗ್ಡೆ, ವಿಶ್ವಾಸ್ ದಾಸ್, ನವೀನ್ ಡಿಸೋಜ, ಸಬಿತಾ ಮಿಸ್ಕಿತ್, ಪ್ರಕಾಶ್ ಸಾಲಿಯಾನ್, ಟಿ.ಕೆ ಸುಧೀರ್, ಎಂಜಿ ಹೆಗ್ಡೆ ಇದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಮೊಹಮ್ಮದ್ ಮಸೂದ್, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಕಳ್ಳಿಗೆ ತಾರಾನಾಥ್ ಶೆಟ್ಟಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಥಿ, ಶಾಂತಲಾ ಗಟ್ಟಿ, ಚಂದ್ರಕಲಾ, ಅಬ್ದುಲ್ ರವೂಫ್ ಸೇರಿದಂತೆ ಪಾಲಿಕೆ ಸದಸ್ಯರು ಇದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಪ್ರಾಸ್ತಾವಿಕ ಮಾತನಾಡಿದರು.
The election office of Mangaluru South Congress candidate J R Lobo was inaugurated on Monday, April 17 on Kadri-Nanthoor Road. Party workers Padmanabh Amin and Sadhashiv Amin formally inaugurated by lighting the lamp along with other dignitaries.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am