ಬ್ರೇಕಿಂಗ್ ನ್ಯೂಸ್
18-04-23 06:34 pm Mangaluru Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಡಾ.ಭರತ್ ಶೆಟ್ಟಿ ಕಾವೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಬೆಳಗ್ಗೆ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಗೈದು ಅಲ್ಲಿಂದ ಕಾವೂರಿನ ವರೆಗೆ ಕಾರ್ಯಕರ್ತರ ಮೆರವಣಿಗೆ ನಡೆಯಿತು. ನೂರಾರು ಕಾರ್ಯಕರ್ತರು ಮೆರವಣಿಗೆ ನಡೆಸಿದರೆ, ಶಾಸಕ ಭರತ್ ಶೆಟ್ಟಿ ಮತ್ತು ಸ್ಥಳೀಯ ಬಿಜೆಪಿ ನಾಯಕರು ವಾಹನದಲ್ಲಿ ರೋಡ್ ಶೋ ನಡೆಸಿದರು.
ಬಳಿಕ ಕಾವೂರಿನಲ್ಲಿ ಸಾರ್ವಜನಿಕ ಸಭೆ ನಡೆಸಿದ್ದು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಶೆಟ್ಟಿ ಮತ್ತು ಪುರಂದರದಾಸ್ ಕುಳೂರು ಬಿಜೆಪಿ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಅಭಿವೃದ್ಧಿ ಮತ್ತು ಹಿಂದುತ್ವವನ್ನು ನಾವು ಜೊತೆ ಜೊತೆಯಾಗಿಯೇ ಕೊಂಡೊಯ್ದಿದ್ದೇವೆ. ಈ ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದು, ಧರ್ಮದ ರಕ್ಷಣೆಯನ್ನು ಮಾಡುವುದು ಕೋಮುವಾದ ಎನ್ನಿಸಿದರೆ, ನಾವು ಕೋಮುವಾದಿಗಳೆಂದು ಕರೆಸಿಕೊಳ್ಳಲು ರೆಡಿ ಇದ್ದೇವೆ. ಆದರೆ ನಮ್ಮ ಕ್ಷೇತ್ರದಲ್ಲಿ ಯಾವುದೇ ಮತ ಮಾರಾಟಕ್ಕಿಲ್ಲ ಎಂಬುದನ್ನು ನಾವು ಸಾರಿ ಹೇಳುತ್ತೇವೆ. ಕಳೆದ ಬಾರಿ 26 ಸಾವಿರ ಮತಗಳಿಂದ ಗೆದ್ದಿದ್ದರೆ, ಈ ಬಾರಿ 50 ಸಾವಿರ ಮತಗಳಿಂದ ಗೆಲ್ಲುವುದು ನಮ್ಮ ಗುರಿ ಎಂದರು.







ಶಾಸಕ ಭರತ್ ಶೆಟ್ಟಿ ಮಾತನಾಡಿ, ಐದು ವರ್ಷಗಳ ಕಾಲ ಮನೆಯ ಮಗನಾಗಿ ಬೆಳೆಸಿದ್ದೀರಿ. ನೀವು ಹೇಳಿದ ಕೆಲಸವನ್ನು ನಾನು ಮಾಡಿದ್ದೇನೆ. ಬಹಳಷ್ಟು ಅಭಿವೃದ್ಧಿ ಕಾರ್ಯ ಮಾಡಲು ಬಾಕಿಯಿದೆ, ಅದನ್ನು ಪೂರೈಸಲು ನಮಗೆ ಮತ್ತೊಂದು ಅವಕಾಶ ಕೊಡುತ್ತೀರೆಂದು ನಂಬಿದ್ದೇನೆ ಎಂದರು. ಕಾವೂರಿನಲ್ಲಿ ತಮ್ಮ ವಾಹನದಲ್ಲಿ ಬಂದ ಭರತ್ ಶೆಟ್ಟಿ ಮಂಗಳೂರಿನ ತಾಲೂಕು ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ, ಮೊಗವೀರ ಮುಖಂಡ ರಾಮಚಂದ್ರ ಬೈಕಂಪಾಡಿ ಸೇರಿದಂತೆ ಹಲವಾರು ಮುಖಂಡರು ಜೊತೆಗಿದ್ದರು.
Sitting BJP Mangaluru North MLA Dr Bharath Y Shetty filed his nomination papers for the upcoming legislative assembly elections here at Mangaluru taluk office on Tuesday April 18. Before filing the nomination, Dr Shetty offered pooja rituals and took blessings at Kavoor temple in the presence of party representatives and supporters.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm