ಬ್ರೇಕಿಂಗ್ ನ್ಯೂಸ್
18-04-23 06:34 pm Mangaluru Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಡಾ.ಭರತ್ ಶೆಟ್ಟಿ ಕಾವೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಬೆಳಗ್ಗೆ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಗೈದು ಅಲ್ಲಿಂದ ಕಾವೂರಿನ ವರೆಗೆ ಕಾರ್ಯಕರ್ತರ ಮೆರವಣಿಗೆ ನಡೆಯಿತು. ನೂರಾರು ಕಾರ್ಯಕರ್ತರು ಮೆರವಣಿಗೆ ನಡೆಸಿದರೆ, ಶಾಸಕ ಭರತ್ ಶೆಟ್ಟಿ ಮತ್ತು ಸ್ಥಳೀಯ ಬಿಜೆಪಿ ನಾಯಕರು ವಾಹನದಲ್ಲಿ ರೋಡ್ ಶೋ ನಡೆಸಿದರು.
ಬಳಿಕ ಕಾವೂರಿನಲ್ಲಿ ಸಾರ್ವಜನಿಕ ಸಭೆ ನಡೆಸಿದ್ದು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಶೆಟ್ಟಿ ಮತ್ತು ಪುರಂದರದಾಸ್ ಕುಳೂರು ಬಿಜೆಪಿ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಅಭಿವೃದ್ಧಿ ಮತ್ತು ಹಿಂದುತ್ವವನ್ನು ನಾವು ಜೊತೆ ಜೊತೆಯಾಗಿಯೇ ಕೊಂಡೊಯ್ದಿದ್ದೇವೆ. ಈ ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದು, ಧರ್ಮದ ರಕ್ಷಣೆಯನ್ನು ಮಾಡುವುದು ಕೋಮುವಾದ ಎನ್ನಿಸಿದರೆ, ನಾವು ಕೋಮುವಾದಿಗಳೆಂದು ಕರೆಸಿಕೊಳ್ಳಲು ರೆಡಿ ಇದ್ದೇವೆ. ಆದರೆ ನಮ್ಮ ಕ್ಷೇತ್ರದಲ್ಲಿ ಯಾವುದೇ ಮತ ಮಾರಾಟಕ್ಕಿಲ್ಲ ಎಂಬುದನ್ನು ನಾವು ಸಾರಿ ಹೇಳುತ್ತೇವೆ. ಕಳೆದ ಬಾರಿ 26 ಸಾವಿರ ಮತಗಳಿಂದ ಗೆದ್ದಿದ್ದರೆ, ಈ ಬಾರಿ 50 ಸಾವಿರ ಮತಗಳಿಂದ ಗೆಲ್ಲುವುದು ನಮ್ಮ ಗುರಿ ಎಂದರು.







ಶಾಸಕ ಭರತ್ ಶೆಟ್ಟಿ ಮಾತನಾಡಿ, ಐದು ವರ್ಷಗಳ ಕಾಲ ಮನೆಯ ಮಗನಾಗಿ ಬೆಳೆಸಿದ್ದೀರಿ. ನೀವು ಹೇಳಿದ ಕೆಲಸವನ್ನು ನಾನು ಮಾಡಿದ್ದೇನೆ. ಬಹಳಷ್ಟು ಅಭಿವೃದ್ಧಿ ಕಾರ್ಯ ಮಾಡಲು ಬಾಕಿಯಿದೆ, ಅದನ್ನು ಪೂರೈಸಲು ನಮಗೆ ಮತ್ತೊಂದು ಅವಕಾಶ ಕೊಡುತ್ತೀರೆಂದು ನಂಬಿದ್ದೇನೆ ಎಂದರು. ಕಾವೂರಿನಲ್ಲಿ ತಮ್ಮ ವಾಹನದಲ್ಲಿ ಬಂದ ಭರತ್ ಶೆಟ್ಟಿ ಮಂಗಳೂರಿನ ತಾಲೂಕು ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ, ಮೊಗವೀರ ಮುಖಂಡ ರಾಮಚಂದ್ರ ಬೈಕಂಪಾಡಿ ಸೇರಿದಂತೆ ಹಲವಾರು ಮುಖಂಡರು ಜೊತೆಗಿದ್ದರು.
Sitting BJP Mangaluru North MLA Dr Bharath Y Shetty filed his nomination papers for the upcoming legislative assembly elections here at Mangaluru taluk office on Tuesday April 18. Before filing the nomination, Dr Shetty offered pooja rituals and took blessings at Kavoor temple in the presence of party representatives and supporters.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm