ಬ್ರೇಕಿಂಗ್ ನ್ಯೂಸ್
20-04-23 06:41 pm Mangalore Correspondent ಕರಾವಳಿ
ಮಂಗಳೂರು, ಎ.20 : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪಟ್ಟಣದ ಬಡ ಟೈಲರ್ ಒಬ್ಬರಿಗೆ ಕೇರಳ ಲಾಟರಿಯ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ಕೇರಳ ಲಾಟರಿಯ 80 ಲಕ್ಷ ರೂ. ಅವರಿಗೆ ದೊರೆತಿದೆ.
ಉಪ್ಪಿನಂಗಡಿಯ ಆನಂದ ಟೈಲರ್ ಎಂಬವರಿಗೆ ಈ ಬಹುಮಾನ ದೊರೆತಿದೆ. ಕೇರಳದ ಕಾಸರಗೋಡಿನಿಂದ ಇವರು ಲಾಟರಿ ಖರೀದಿಸಿದ್ದರು. ನೀಲೇಶ್ವರದಲ್ಲಿರುವ ಮಗಳ ಮನೆಗೆ ಹೋಗಿದ್ದಾಗ ಟಿಕೇಟ್ ಕೊಂಡಿದ್ದರು. ಈ ಕೇರಳ ರಾಜ್ಯ ಲಾಟರಿಗೆ 80 ಲಕ್ಷ ರೂ. ಮೊದಲ ಬಹುಮಾನವಿತ್ತು. ಎಪ್ರಿಲ್ 15ರಂದು ಡ್ರಾ ಆಗಿದ್ದು, ಆನಂದರಿಗೆ ಒಲಿದಿದೆ.
ಅನಾರೋಗ್ಯದಿಂದ ಟೈಲೊರ್ ವೃತ್ತಿ ನಿಲ್ಲಿಸಿದ್ದ ಆನಂದ ಬಡತನದ ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಅಪರೂಪಕ್ಕೆ ಕೇರಳಕ್ಕೆ ಹೋದಾಗ ಲಾಟರಿ ಖರೀದಿಸುತ್ತಿದ್ದರು.
ಕರ್ನಾಟಕದಲ್ಲಿ ಲಾಟರಿ ನಿಷೇಧಿಸಲಾಗಿದೆ. ಆದರೆ ಕೇರಳದಲ್ಲಿ ರಾಜ್ಯ ಸರ್ಕಾರವೇ ಲಾಟರಿ ನಡೆಸುತ್ತಿದೆ. ಕರ್ನಾಟಕದಿಂದ ತೆರಳುವ ಮಂದಿ ಆಗಾಗ ಇಲ್ಲಿ ಲಾಟರಿ ಪಡೆಯುವ ಸುದ್ದಿಗಳು ಬರುತ್ತಿವೆ. ದಕ್ಷಿಣ ಕನ್ನಡದ ಸುಳ್ಯ ಮೂಲದ ಸಣ್ಣ ಹೋಟೆಲ್ ನಡೆಸುವ ವ್ಯಕ್ತಿಯೊಬ್ಬರು ಕೇರಳ ಲಾಟರಿಯಲ್ಲಿ 4 ಕೋಟಿ ರೂ. ಹಣ ಪಡೆದ ಘಟನೆ 2019ರಲ್ಲಿ ನಡೆದಿತ್ತು.
ಕೇರಳ ಲಾಟರಿ, ಕೇರಳದ ಅಂಗಡಿಗಳಲ್ಲಿ ಮಾತ್ರ ಸಿಗುತ್ತಿದ್ದು, ರಾಜ್ಯದಾಚೆ ಸಿಗುವುದಿಲ್ಲ ಹಾಗೂ ಅದನ್ನು ಆನ್ಲೈನ್ನಲ್ಲಿ ಬಿಕರಿ ಮಾಡಲಾಗುವುದಿಲ್ಲ. ಕೇರಳ ಲಾಟರಿ ಎಂಬ ಹೆಸರಿನಿಂದ ವಂಚಿಸುವ ಕೆಲವು ವೆಬ್ಸೈಟ್ಗಳು ಈ ಅಧಿಕೃತ ಲಾಟರಿಯ ಜನಪ್ರಿಯತೆಯ ಹಿನ್ನೆಲೆಯಲ್ಲಿ ಕಾರ್ಯಾಚರಿಸುತ್ತವೆ.
Lady Luck smiled on elderly retired tailor Ananda Tailor (72), residing near Gandhi Park in Uppinangady, who was facing enormous difficulties in life, in the form of Karunya lottery of Kerala state. He won the first prize of Rs 80 lac. Ananda worked as tailor for more than 30 years. He was also the gram panchayat member and vice president for one term. However, he had to give up his profession due to illness he developed in his legs.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm